ಅಗತ್ಯ ಉಳ್ಳವರಿಗೆ ಉಚಿತವಾಗಿ ವಕೀಲರ ನೇಮಕ: ನ್ಯಾ.ನಾಜಿಯಾ ಕೌಸರ್

KannadaprabhaNewsNetwork |  
Published : Jun 27, 2025, 12:48 AM IST
25ಕೆಎಂಎನ್ ಡಿ23 | Kannada Prabha

ಸಾರಾಂಶ

ಹಿರಿಯರಿಗೆ ಸಂದ್ಯಾ ಸುರಕ್ಷಾ ಮತ್ತು ವೃದ್ದಾಪ್ಯ ಯೋಜನೆಯಡಿ ಮಾಸಿಕ 1200 ರು. ಗೌರವಧನ, ಸಾರಿಗೆಯಲ್ಲಿ ಪ್ರಯಾಣಿಕರಿಗೆ ರಿಯಾಯಿತಿ, ಬ್ಯಾಂಕ್ ನಲ್ಲಿ ಆಕರ್ಷಕ ಬಡ್ಡಿದರ, ಉಚಿತ ಆರೋಗ್ಯ ತಪಾಸಣೆ ಸೌಲಭ್ಯಗಳಿದ್ದು, ಸದ್ಬಳಕೆ ಮಾಡಿಕೊಳ್ಳಿ .

ಹಲಗೂರು: ತಾಲೂಕು ಕಾನೂನು ಸೇವೆಗಳ ಸಮಿತಿ, ಪೊಲೀಸ್ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದ ಕುವೆಂಪು ಸಭಾಂಗಣದಲ್ಲಿ ವಿಶ್ವ ಹಿರಿಯರ ಮೇಲಿನ ದೌರ್ಜನ್ಯ ಜಾಗೃತಿ ದಿನಾಚರಣೆ ನಡೆಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಜಿಯಾ ಕೌಸರ್ ಮಾತನಾಡಿ, ದೇಶದಲ್ಲಿ ಹಿರಿಯ ನಾಗರಿಕರು ಯಾವುದೇ ಬಗೆಯ ದೈಹಿಕ, ಮಾನಸಿಕ ಹಿಂಸೆಗೆ ಒಳಗಾದರೆ ನ್ಯಾಯಾಲಯಕ್ಕೆ ಬನ್ನಿ, ಅಗತ್ಯ ಉಳ್ಳವರಿಗೆ ಕಾನೂನು ಪ್ರಾಧಿಕಾರದ ವತಿಯಿಂದ ಉಚಿತವಾಗಿ ವಕೀಲರನ್ನು ನೇಮಿಸಿ ನ್ಯಾಯ ದೊರಕಿಸಿಕೊಡಲು ಶ್ರಮಿಸಲಾಗುವುದು ಎಂದರು.

ದೇಶದಲ್ಲಿ 2007ರಲ್ಲಿ ಹಿರಿಯ ನಾಗರಿಕರ ಹಕ್ಕುಗಳ ಕಾಯ್ದೆ ಜಾರಿಗೆ ಬಂದಿದೆ. 60 ವರ್ಷ ವಯಸ್ಸು ಮೇಲ್ಪಟ್ಟವರಿಗಾಗಿ ರಾಜ್ಯ ಮಟ್ಟದಲ್ಲಿ ಸಂಖ್ಯೆ 1090, ರಾಷ್ಟ್ರ ಮಟ್ಟದಲ್ಲಿ 145678 ಎರಡು ಉಚಿತ ಸಹಾಯ ವಾಣಿಗಳನ್ನು ತೆರೆದಿದೆ. ಅಗತ್ಯ ಉಳ್ಳವರು ಕರೆ ಮಾಡಿದರೆ ಹಿರಿಯರ ನೆರವಿಗೆ ನಿಲ್ಲಲಿದೆ ಎಂದು ಹೇಳಿದರು.

ಸರ್ಕಾರಿ ವಕೀಲ ಎಂ.ಎಸ್.ಶ್ರೀಕಂಠಸ್ವಾಮಿ ಮಾತನಾಡಿ, ಸರ್ಕಾರ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ಆರಂಭಿಸಿದ್ದು, ಹಿರಿಯ ನಾಗರಿಕರಿಗೆ ಊಟದ ವ್ಯವಸ್ಥೆಯ ಜೊತೆಗೆ ಹಲವು ಬಗೆಯ ಚಟುವಟಿಕೆಗಳನ್ನು ಒದಗಿಸಿಕೊಡಲಾಗುತ್ತದೆ ಎಂದು ತಿಳಿಸಿದರು.

ಹಿರಿಯರು ವಯಸ್ಸಾದ ನಂತರ ಮಕ್ಕಳನ್ನು ಪ್ರೀತಿ ಮಾಡುವ ಜೊತೆಗೆ ಅಲ್ಪ ಪ್ರಮಾಣದ ಆಸ್ತಿಯನ್ನಾದರೂ ನಿಮ್ಮ ಬಳಿ ಉಳಿಸಿಕೊಳ್ಳಬೇಕು. ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ, ಸಮಾನ ಮನಸ್ಕರರು ಒಂದು ಗುಂಪು ರಚಿಸಿಕೊಂಡು ಕಷ್ಟ ಸುಖವನ್ನು ಹಂಚಿಕೊಂಡು ಮಾನಸಿಕವಾಗಿ ಹಗುರವಾಗಿ, ಉತ್ತಮ ಜೀವನ ನಡೆಸಿ ಎಂದು ಕಿವಿಮಾತು ಹೇಳಿದರು.

ಪ್ಯಾನಲ್ ವಕೀಲರಾದ ಎಂ.ಪಿ.ಮೋಹನ್ ಕುಮಾರ್ ಮಾತನಾಡಿ, ಹಿರಿಯರಿಗೆ ಸಂದ್ಯಾ ಸುರಕ್ಷಾ ಮತ್ತು ವೃದ್ದಾಪ್ಯ ಯೋಜನೆಯಡಿ ಮಾಸಿಕ 1200 ರು. ಗೌರವಧನ, ಸಾರಿಗೆಯಲ್ಲಿ ಪ್ರಯಾಣಿಕರಿಗೆ ರಿಯಾಯಿತಿ, ಬ್ಯಾಂಕ್ ನಲ್ಲಿ ಆಕರ್ಷಕ ಬಡ್ಡಿದರ, ಉಚಿತ ಆರೋಗ್ಯ ತಪಾಸಣೆ ಸೌಲಭ್ಯಗಳಿದ್ದು, ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಈ ವೇಳೆ ಹೆಚ್ಚುವರಿ ನ್ಯಾಯಾಧೀಶರಾದ ಕಾವ್ಯಶ್ರೀ, ಗ್ರಾಪಂ ಅಧ್ಯಕ್ಷೆ ಆರ್.ಶಶಿಕಲಾ, ಉಪಾಧ್ಯಕ್ಷೆ ಸಿ.ಲತಾ, ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್, ಪಿಎಸ್ಐ ಲೋಕೇಶ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಚಂದಿಲ್, ಕಾರ್ಯದರ್ಶಿ ಶಿವಕುಮಾರ್ ಸೇರಿ ನೂರಾರು ಹಿರಿಯ ನಾಗರಿಕರು ಭಾಗವಹಿಸಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ