ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶನಿವಾರ ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಆರ್ಯವೈಶ್ಯ ಶ್ರೀರಾಮ ಸೊಸೈಟಿಯ 100ನೇ ವರ್ಷ ವರ್ಷಾಚರಣೆ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಹಿಂದೆ ಮೈಸೂರು ಅರಸರು ಜನಸಾಮಾನ್ಯರಿಗಾಗಿ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಅನೇಕ ಯೋಜನೆಗಳನ್ನು ನೀಡಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಸರ್ವರೂ ಅವರ ಕೈ ಬಲಪಡಿಸಬೇಕು ಎಂದು ಹೇಳಿದರು.
ಪ್ರಧಾನಿ ಮೋದಿಯವರು 2047 ಸಾಲಿಗೆ ದೃಷ್ಟಿ ಇಟ್ಟುಕೊಂಡು ವಿಕಸಿತ ಭಾರತ ಕನಸು ಹೊಂದಿದ್ದಾರೆ. ಅದಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ವಿಶೇಷವಾಗಿ ದೇಶದ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಒಂದು ಸಹಕಾರಿ ಸಂಘ ಸ್ಥಾಪನೆ ಆಗಬೇಕು. ಆಗ ಮೂಲಕ ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ಸಾಗಿಸಬೇಕೆನ್ನುವುದು ಅವರ ಕಲ್ಪನೆಯಾಗಿದೆ. ಇದರಿಂದ ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಶಕ್ತಿ ಸಿಗಲಿದೆ ಎಂದರು.ಮೈಸೂರು ಅರಸರು ಕಟ್ಟಿದ ಆಣೆಕಟ್ಟೆಗಳು, ಕಾರ್ಖಾನೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಹಕಾರ ಸಂಘಗಳು ಈಗಿನ ಜನರಿಗೆ ಫಲ ನೀಡುತ್ತಿವೆ. ಅದರಂತೆ ಮೋದಿ ಅವರು ಮೈಸೂರು ಅರಸರ ಪ್ರತಿಧ್ವನಿಯಾಗಿ ಇಡೀ ದೇಶದ ಏಳಿಗೆ ಹಾಗೂ ಮುಂದಿನ ಪೀಳಿಗೆಗೆ ಅನುಕೂಲವಾಗಲು ವಿಕಸಿತ ಭಾರತ ನಿರ್ಮಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
ಶಿವಮೊಗ್ಗ ಎಂದರೆ ಮಲೆನಾಡು. ಮೈಸೂರು ಅರಸರಿಗೆ ಅಚ್ಚು ಮೆಚ್ಚಿನ ತಾಣ. ಇಲ್ಲಿನ ಕೆಮ್ಮಣ್ಣಗುಂಡಿ ಗಿರಿಧಾಮ, ಸಾಗರ ಇತ್ಯಾದಿಗಳಲ್ಲಿ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಇಂದಿಗೂ ಶಿವಮೊಗ್ಗದೊಂದಿಗೆ ಮೈಸೂರು ಮನೆತನಕ್ಕೆ ಉತ್ತಮ ಬಾಂಧವ್ಯ ಇದೆ ಎಂದು ಸ್ಮರಿಸಿದರು.
ಪ್ರಮುಖವಾಗಿ ಭಾರತದಲ್ಲಿ ಹಿಂದೂಗಳ ಪರಿಸ್ಥಿತಿ ಕಷ್ಟದಲ್ಲಿದೆ. ಬಾಂಗ್ಲಾದೇಶದಲ್ಲಿ ಶೇ.9ರಷ್ಟು ಹಿಂದೂಗಳಿದ್ದರೂ ಸಾರ್ವಜನಿಕ ದುರ್ಗಾಪೂಜೆಗೆ ಅವಕಾಶವಿಲ್ಲ. ಭಾರತದಲ್ಲಿ ಹಿಂದೂಗಳು ಶೇ.80 ರಷ್ಟಿದ್ದರೂ ಗಣಪತಿ ಮೆರವಣಿಗೆಗೆ ಕಲ್ಲು ತೂರುತ್ತಾರೆ. ಇಂತಹ ಪರಿಸ್ಥಿತಿ ಬಗ್ಗೆ ಎಲ್ಲರೂ ಎಚ್ಚರವಹಿಸಬೇಕು ಎಂದರು.