ಕನ್ನಡಪ್ರಭ ವಾರ್ತೆ ಟೇಕಲ್
ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಮನೆ ಇಲ್ಲದ ಕುಟುಂಬಗಳನ್ನು ಕೆ.ಜಿ.ಹಳ್ಳಿ ಗ್ರಾಪಂ ಪಟ್ಟಿ ಮಾಡಲಿ. ಅವರಿಗೆ ನಿವೇಶನವನ್ನು ನೀಡಲು ತಹಸೀಲ್ದಾರ್ ರವರು ಕಾನೂನುಬದ್ಧ ವ್ಯವಸ್ಥೆ ಮಾಡುತ್ತಾರೆ. ಇನ್ನಾವುದೇ ಕಾರಣಕ್ಕೂ ಈ ಸ್ಥಳದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಳ್ಳಲು ಬಿಡಬಾರದೆಂದು ಸೂಚಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಸ್ಥಳದಲ್ಲಿದ್ದ ಕೆ.ಜಿ.ಹಳ್ಳಿ ಗ್ರಾ.ಪಂ.ಅಧ್ಯಕ್ಷರಿಗೆ ಎಸ್.ಆರ್.ಯಲ್ಲಪ್ಪ ನವರಿಗೆ ನಿವೇಶನ ರಹಿತರ ಪಟ್ಟಿ ಮಾಡಿ ಪಂಚಾಯ್ತಿಯಲ್ಲಿ ಪ್ರಸ್ತಾವನೆಗೆ ತಂದು ತಿಳಿಸಿ, ತದನಂತರ ಅವರಿಗೆ ಕಾನೂನು ಅಡಿಯಲ್ಲಿ ಸಹಕಾರ ನೀಡಲಾಗುವುದು. ಸರ್ವೆ ನಂ.73 ರಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಇದೀಗ ಸರ್ಕಾರದಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು ಆದಷ್ಟು ಬೇಗ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ರಮೇಶ್, ಇಒ ಕೃಷ್ಣಪ್ಪ, ಪಂಚಾಯ್ತಿ ಅಧ್ಯಕ್ಷ ಎಸ್.ಆರ್.ಯಲ್ಲಪ್ಪ, ಉಪಾಧ್ಯಕ್ಷೆ ಮಮತಶಶಿಧರ, ಉಪತಹಶೀಲ್ದಾರ್ ಮಮತಾದೇವಿ, ಆರ್.ಐ ನಾರಾಯಣಸ್ವಾಮಿ, ಮಾಜಿ ತಾ.ಪಂ.ಸದಸ್ಯೆ ಕಾಂತಮ್ಮಸಂಪಂಗಿ, ರಮೇಶ್ಗೌಡ, ವಿನೋದ್ಗೌಡ, ಪಿಡಿಒ ಮಂಜುಳ, ಎ.ಕೆ.ವೆಂಕಟೇಶ್, ಮುಂತಾದವರು ಉಪಸ್ಥಿತರಿದ್ದರು.