ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಆದರೆ, ಆ ಸ್ವಾತಂತ್ರ್ಯ ಪ್ರತಿದಿನ, ಪ್ರತಿಕ್ಷಣ, ಪ್ರತಿನಿಮಿಷ ದೇಶಾದ್ಯಂತ ಒಂದಲ್ಲಾ ಒಂದು ರೀತಿ ಒಂದು ವರ್ಷದ ಮಗುವಿನಿಂದ ನೂರು ವರ್ಷದ ವೃದ್ಧೆಯವರೆಗೂ ಅತ್ಯಾಚಾರ, ದೌರ್ಜನ್ಯ, ಕೊಲೆ, ವರದಕ್ಷಿಣೆ, ಕಿರುಕುಳ ಒಂದಲ್ಲಾ ಸಮಸ್ಯೆಯಿಂದ ಬಾಳಿ ಬದುಕಬೇಕಾದ ಹೆಣ್ಣು ಮಗು ಈ ದೇಶದ ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರವರೆಗೂ ಮೃಗಗಳಂತೆ ವರ್ತನೆ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸರ್ಕಾರಗಳು ವಿಫಲವಾಗಿವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.ಕೊಲ್ಕತ್ತಾತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಮೇಲೆ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ವೈದ್ಯಕೀಯ ವಲಯದಲ್ಲಿ ತಲ್ಲಣ ಉಂಟು ಮಾಡುತ್ತಿದೆ. ಮಹಿಳೆಯ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದಾಗ ದೇಶಾದ್ಯಂತ ಸಾರ್ವಜನಿಕರ ಸಂಘಸಂಸ್ಥೆಗಳ ಹೋರಾಟಕ್ಕೆ ತಣ್ಣೀರು ಎರೆಚಲು ಸರ್ಕಾರಗಳು ಸಂಬಂಧಪಟ್ಟ ಇಲಾಖೆಯವರು ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುತ್ತೇವೆ ಎಂದು ಭರವಸೆ ನೀಡಿ ನಾಪತ್ತೆಯಾದರೆ ಮತ್ತೆ ಅದೇ ಪ್ರಕರಣಗಳು ಮರುಕಳಿಸಿದಾಗ ಮಾತ್ರ ಮಾನವೀಯ ಮೌಲ್ಯಗಳಿಲ್ಲದ ಸರ್ಕಾರಗಳು ಅದೇ ರಾಗ, ಅದೇ ತಾಳ ಎಂಬಂತೆ ತಪ್ಪು ಭರವಸೆಯನ್ನು ನೀಡಿ ನಾಪತ್ತೆಯಾಗುತ್ತಿದ್ದಾರೆ ಎಂದರು.ಸಿಎಂ ನಿವಾಸದ ಮುಂದೆ ಪ್ರತಿಭಟನೆಪದೇಪದೇ ಇದೇ ರೀತಿ ಮಹಿಳೆಯ ಮೇಲೆ ದೌರ್ಜನ್ಯ ನಡೆಯುತ್ತಿದ್ದರೆ ಲಕ್ಷಾಂತರ ಮಹಿಳೆಯರೊಂದಿಗೆ ಕಾನೂನು ರಚನೆ ಮಾಡಲು ವಿಫಲವಾಗಿರುವ ಮುಖ್ಯಮಂತ್ರಿಗಳ ಮನೆ ಮುಂದೆ ಪೊರಕೆ ಚಳವಳಿ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಅಪ್ಪೋಜಿರಾವ್, ಶೈಲಜ, ವೆಂಕಟಮ್ಮ, ಗೌರಮ್ಮ, ರತ್ನಮ್ಮ, ಮುನಿವೆಂಕಟಮ್ಮ, ನಾನಮ್ಮಇದ್ದರು.