ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ/ಗುಡಿಬಂಡೆ
ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ದುಡಿಯೋಣ ಬಾ ಹಾಗೂ ಸ್ತ್ರೀ ಚೇತನ ಅಭಿಯಾನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ನರೇಗಾ ಜಾಗೃತಿ ಕರಪತ್ರ ವಿತರಣೆ ಮಾಡಿ ಜಾಗೃತಿ ಮೂಡಿಸಲಾಯಿತು.ತಾಲೂಕು ಅಭಿಯಾನ ನಿರ್ವಹಣಾ ಘಟಕ, ಪರಿವರ್ತನ ಅಭಿಯಾನ ಘಟಕ ಮತ್ತು ವರ್ಲಕೊಂಡ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸ್ತ್ರೀ ಚೇತನ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ ಮಾತನಾಡಿದರು.
ಸ್ತ್ರೀ ಚೇತನ ಅಭಿಯಾನಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗುತ್ತಿದೆ. ಜತೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ದಿನಕ್ಕೆ ಎರಡು ಬಾರಿ ಎನ್ಎಂಎಂಎಸ್ ಹಾಜರಿ ಕಡ್ಡಾಯವಾಗಿ ಮಾಡಬೇಕು ಎಂದು ಅವರು ಹೇಳಿದರು.
ಸಾರ್ವಜನಿಕರ ಕುಂದುಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ 82775 06000 ಗೆ ಕರೆ ಮಾಡಬಹುದು. ಗ್ರಾಮೀಣ ಪ್ರದೇಶದ ಅಕುಶಲ ಕರ್ಮಿಗಳಿಗೆ ಬೇಸಿಗೆಯಲ್ಲಿ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಜೂ.30 ರ ವರೆಗೆ ಈ ಯೋಜನೆಯು ಕ್ರಿಯಾಶೀಲವಾಗಿ ನಡೆಯಲಿದೆ.ಖಾತ್ರಿ ಕೂಲಿ ದರ ದಿನಕ್ಕೆ ₹ 370
ತಾಲೂಕು ಮಾಹಿತಿ ಶಿಕ್ಷಣ ಸಂಯೋಜಕ ರಾಮಾಂಜಿ ಮಾತನಾಡಿ, ಮ-ನರೇಗಾ ಯೋಜನೆಯಡಿ ಆಯಾ ರಾಜ್ಯಗಳಿಗೆ ಅನುಗುಣವಾಗಿ ಕೂಲಿಯನ್ನು ನಿಗದಿ ಮಾಡಲಾಗಿದ್ದು ಕರ್ನಾಟಕದಲ್ಲಿ ಇದುವರೆಗೂ 349 ರೂ. ಕೂಲಿ ಪಡೆಯುತ್ತಿದ್ದವರು ಏಪ್ರಿಲ್ 1 ರಿಂದ 370 ರೂ. ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು..ಎನ್.ಆರ್.ಎಲ್.ಎಂ ಯೋಜನೆಯ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಆಂಜನೇಯಪ್ಪ, ಎಫ್.ಎಲ್.ಸಿ ಅಶ್ವಥ್ ನಾರಾಯಣ, ಎನ್.ಆರ್.ಎಲ್.ಎಂ. ವಲಯ ಮೇಲ್ವಿಚಾರಕಿ ಮೀನ ಡಿ.ಎ, ಕೃಷಿಯೇತರ ವ್ಯವಸ್ಥಾಪಕ ಚೇತನ್ ,ಸ್ವ ಸಹಾಯ ಸಂಘದ ಮಹಿಳೆಯರು, ಮತ್ತಿತರರು ಇದ್ದರು.