ಕನ್ನಡಪ್ರಭ ವಾರ್ತೆ ಕೆಜಿಎಫ್ವಾಯುಮಾಲಿನ್ಯ ತಡೆಯಲು ವಾಹನಗಳನ್ನು ಸುಸ್ಥಿತಿಲ್ಲಿಡುವುದು ಎಲ್ಲರ ಆದ್ಯ ಕರ್ತವ್ಯ ಎಂದು ಕೆಜಿಎಫ್ನ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಸಾರಿಗೆ ಅಧಿಕಾರಿ ಗಜೇಂದ್ರಬಾಬು ಅಭಿಪ್ರಾಯಪಟ್ಟರು.ಕೆಜಿಎಫ್ ಜಿಲ್ಲಾ ಸಾರಿಗೆ ಇಲಾಖೆ ವತಿಯಿಂದ ಆಯೋಜಿ ಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಿನೇ ದಿನೆ ಹೆಚ್ಚು ತ್ತಿರುವ ವಾಹನ ದಟ್ಟಣೆಯಿಂದ ವಾಯು ಮಾಲಿನ್ಯವೂ ಅಧಿಕಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ನಾವು ಬಳಸುವ ವಾಹನಗಳನ್ನು ಸುಸ್ಥಿತಿಯಲ್ಲಿಡುವುದರ ಮೂಲಕ ವಾಯು ಮಾಲಿನ್ಯ ತಡೆಯಬೇಕು ಎಂದರು.ವಾಹನಗಳನ್ನು ಸುಸ್ಥಿತಿಯಲ್ಲಿಡಿ
ನಮ್ಮ ಹೆಚ್ಚಿನ ವಿದ್ಯುತ್ ಪಳೆಯುಳಿಕೆ ಇಂಧನಗಳ ದಹನದಿಂದ ಉತ್ಪತ್ತಿಯಾಗುತ್ತದೆ, ಇದು ವಾಯು ಮಾಲಿನ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತದೆ. ಆದ್ದರಿಂದ, ವಿದ್ಯುತ್ ಸಂರಕ್ಷಣೆಯು ವಾಯು ಮಾಲಿನ್ಯವನ್ನು ತಡೆಗಟ್ಟುವ ಪರಿಣಾಮಕಾರಿ ಮಾರ್ಗ. ಉತ್ಪನ್ನಗಳ ಮರುಬಳಕೆ ಮತ್ತು ಮರುಬಳಕೆ - ಉತ್ಪನ್ನಗಳನ್ನು ಮರುಬಳಕೆ ಮಾಡುವುದರಿಂದ ಉತ್ಪನ್ನವನ್ನು ತಯಾರಿಸಲು ಹೋಗುವ ಶಕ್ತಿಯ ಪ್ರಮಾಣವನ್ನು ಸಂರಕ್ಷಿಸಲಾಗುತ್ತದೆ. ಇದಲ್ಲದೆ, ಉತ್ಪನ್ನಗಳ ಮರುಬಳಕೆಯು ಹೊಸದನ್ನು ತಯಾರಿಸುವುದಕ್ಕಿಂತ ಹೆಚ್ಚು ಶಕ್ತಿ-ಸಮರ್ಥವಾಗಿರುತ್ತದೆ ಎಂದರು. ಈ ಸಂದರ್ಭದಲ್ಲಿ ಉಪ ವಾಹನ ಮೋಟಾರು ನೀರಿಕ್ಷಕರಾದ ಮುನಿಕೃಷ್ಣ, ಕಛೇರಿಯ ಅಧೀಕ್ಷಕರಾದ ಆನಂದ್ಕುಮಾರ್, ಸುಬ್ರಮಣಿ, ಪ್ರಕಾಶ್ ತಾಯಲೂರು ಸುಹೇಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.