‘ಕಳಚಿಬಿದ್ದ ಕೇಜ್ರಿವಾಲ್ ಮುಖವಾಡ’

KannadaprabhaNewsNetwork |  
Published : Feb 11, 2025, 12:50 AM IST
ದೆಹಲಿಯಲ್ಲಿ ಬಿ.ಜೆ.ಪಿ ಗೆಲುವು ಗೌರಿಬಿದನೂರಿನಲ್ಲಿ ಸಂಭ್ರಮಾಚರಣೆ | Kannada Prabha

ಸಾರಾಂಶ

ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್‌ ಗೆ ಬೆಂಬಲಿಸಿದ್ದರು. ಆದರೆ ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದರು. ಹಾಗಾಗಿ ಮತದಾರ ಬದಲಾವಣೆ ಬಯಸಿ ಬಿಜೆಪಿಯನ್ನು ಬೆಂಬಲಿಸಿದ್ದಾನೆ. ಆಪ್‌ ಭ್ರಷ್ಟಾಚಾರಕ್ಕೆ ಬೇಸತ್ತು ಮತದಾರ ಬಿಜೆಪಿ ಬೆಂಬಲಿಸಿದ್ದಾನೆ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಪ್ರಬುದ್ಧ ಮತದಾರರು ದಿಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿರವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಪಕ್ಷದ ಮುಖಂಡ ಎನ್.ಎಂ.ರವಿನಾರಾಯಣರೆಡ್ಡಿ ತಿಳಿಸಿದರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆಯ ಬಳಿಕ ಮಾತನಾಡಿದ ಅವರು, ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ ಎಂದರು.

ಭ್ರಷ್ಟಾಚಾರ ವಿರುದ್ಧ ಮತ

ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್‌ ಗೆ ಬೆಂಬಲಿಸಿದ್ದರು. ಆದರೆ ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದರು. ಹಾಗಾಗಿ ಮತದಾರ ಬದಲಾವಣೆ ಬಯಸಿ ಬಿಜೆಪಿಯನ್ನು ಬೆಂಬಲಿಸಿದ್ದಾನೆ ಎಂದರು.ಬಿಜೆಪಿ ನಗರ ಮಂಡಲದ ಅಧ್ಯಕ್ಷ ಮಾರ್ಕೆಟ್ ಮೋಹನ್ ರವರು ಮಾತನಾಡಿ, ಭ್ರಷ್ಟಾಚಾರದ ನಿರ್ಮೂಲನೆ ಮಾಡುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್ ಬಹುಕೋಟಿ ಅಬಕಾರಿ ಹಗರಣದಲ್ಲಿ ಸಿಲುಕಿಕೊಂಡರು. ಈ ಎಲ್ಲಾ ಅಕ್ರಮಗಳನ್ನು ನೋಡಿ ಜನ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೂಡ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದರು ಇದೇ ಸಂದರ್ಭದಲ್ಲಿ ಎಬಿವಿಪಿ ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಮೃತ್ಯುಂಜಯ ಜಯಣ್ಣ ,ಕೋಡಿರ್ಲಪ್ಪ, ನಕ್ಕಲಹಳ್ಳಿ ರಾಜು, ವೆಂಕಟಾದ್ರಿ, ಮಂಜುನಾಥ್ ರಾವ್, ಪ್ರವೀಣ್ ಕುಮಾರ್, ಪಾರ್ವತಮ್ಮ ,ಫ್ಯಾಕ್ಟರಿ ರಾಮು, ಶಾಂತಕುಮಾರ್ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ