ತನಿಮಡಗು ರಸ್ತೆ ಗುಂಡಿಗೆ ಮುಕ್ತಿ ನೀಡಲಿ

KannadaprabhaNewsNetwork |  
Published : Nov 11, 2024, 11:49 PM IST
10ಕೆಬಿಪಿಟಿ.2.ಬಂಗಾರಪೇಟೆ ತಾಲೂಕಿನ ದೋಣಿಮಡಗು ಪಂಃರಸ್ತೆಗಳು ಅವ್ಯವಸ್ಥೆಯಿಂದ ಕೂಡಿರುವುದು. | Kannada Prabha

ಸಾರಾಂಶ

ತನಿಮಡಗು ಗ್ರಾಮದ ಮೂಲಕ ಬಿಸಾನತ್ತಂ ರೈಲು ನಿಲ್ದಾಣ, ರಾಮಸಂದ್ರ, ಬೋಡಗೊರ್ಕಿ ಹಾಗೂ ಆಂಧ್ರದ ಕುಪ್ಪಂಗೂ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿದೆ. ವರ್ಷಗಳೇ ಕಳೆದರೂ ರಸ್ತೆ ದುರಸ್ತಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ತಾಲೂಕಿನ ಕಾಮಸಮುದ್ರ ಹೋಬಳಿ ದೋಣಿಮಡಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತನಿಮಡಗು ಗ್ರಾಮದ ರಸ್ತೆ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತನಿಮಡಗು ಗ್ರಾಮದ ಮೂಲಕ ಬಿಸಾನತ್ತಂ ರೈಲು ನಿಲ್ದಾಣ, ರಾಮಸಂದ್ರ, ಬೋಡಗೊರ್ಕಿ ಹಾಗೂ ಆಂಧ್ರದ ಕುಪ್ಪಂಗೂ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿದೆ.

ರಸ್ತೆ ದುರಸ್ತಿಗೆ ನಿರ್ಲಕ್ಷ್ಯ

ಗುಂಡಿಗಳು ಬಿದ್ದು ವರ್ಷಗಳೇ ಕಳೆದಿವೆ. ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪ್ರಯತ್ನ ಮಾಡುತ್ತಿಲ್ಲ. ಇದೇ ರಸ್ತೆಯಲ್ಲಿ ಮಕ್ಕಳು, ಹಿರಿಯರು, ವ್ಯಾಪಾರಿಗಳು ವಾಹನಗಳಲ್ಲಿ ನಿತ್ಯವೂ ಸಂಚರಿಸುತ್ತಾರೆ. ದೊಡ್ಡ ಪ್ರಮಾಣದ ಅನಾಹುತ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ತಗ್ಗು ಗುಂಡಿಗಳು ತಲೆಯೆತ್ತಿದ್ದರಿಂದ ಬೈಕ್, ಆಟೊ, ಕಾರು ಮತ್ತಿತರ ವಾಹನಗಳ ಸಂಚಾರ ದುಸ್ಥರವಾಗಿದೆ. ಮಳೆಗಾಲದಲ್ಲಿ ರಸ್ತೆ ಮೇಲೆ ವಾಹನ ಚಲಾಯಿಸಬೇಕಾದರೆ ಹರಸಾಹಸ ಪಡಬೇಕಿದೆ. ಕೆಲವರು ಆಯತಪ್ಪಿ ರಸ್ತೆ ಮೇಲೆ ಬಿದ್ದು ಆಸ್ಪತ್ರೆಗೆ ದಾಖಲಾದ ಉದಾಹರಣೆಗಳಿವೆ. ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ನಾಯಕರು ಅಭ್ಯರ್ಥಿಗಳು ನೀಮುಂದು ನಾಮುಂದು ಎಂದು ಬಂದು ಮತ ಭಿಕ್ಷೆ ಬೇಡುತ್ತಾರೆ. ಇಲ್ಲ ಸಲ್ಲದ ಹುಸಿ ಭರವಸೆಗಳನ್ನು ನೀಡಿ ಹೋದರೆ ಮತ್ತೆ ಅವರ ದರ್ಶನವೇ ಇರಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ದುರಸ್ತಿಗೆ ಆದ್ಯತೆ ನೀಡಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೋಣಿಮಡಗು ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆಯಷ್ಟು ಮತಗಳು ಲಭಿಸದ ಕಾರಣ ಈ ಪಂಚಾಯಿತಿ ಮೇಲೆ ಶಾಸಕರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಪಂಚಾಯಿತಿಗೆ ಸಂಪರ್ಕ ಕಲ್ಪಿಸುವ ಗ್ರಾಮಗಳ ರಸ್ತೆ ಸ್ಥಿತಿ ದೇವರಿಗೇ ಪ್ರೀತಿ. ಕದರಿನತ್ತ ಗ್ರಾಮಕ್ಕೆ ಹೋಗಬೇಕಾದರೆ ಜೀವ ಕೈಯಲ್ಲಿಟ್ಟುಕೊಂಡೇ ಹೋಗಬೇಕು. ಈ ಗ್ರಾಮಕ್ಕೆ ಪಡಿತರ ಲಾರಿ ಹೋಗಲು ಪ್ರತಿ ತಿಂಗಳು ಹರಸಾಹಸ ಮಾಡಬೇಕಿದೆ. ಈಗಲಾದರೂ ಜನಪ್ರತಿನಿಧಿಗಳು ರಸ್ತೆಗಳಿಗೆ ಮೊದಲ ಆದ್ಯತೆ ನೀಡಲಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ