ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಸೋಮವಾರ ರಾತ್ರಿ ಸಿಂಸೆಯ ಕನ್ಯಕುಮಾರಿ ಕಂಪರ್ಟ್ ಹಾಲ್ನಲ್ಲಿ ನಡೆದ ಲಯನ್ಸ್ ಕ್ಲಬ್ ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭದಲ್ಲಿ ನೂತನ ಅಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಕೆ.ಟಿ.ಎಲ್ದೋ ಹಾಗೂ ಖಜಾಂಚಿ ಈಶ್ವರಾಚಾರ್ ಅವರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದರು.
ಲಯನ್ಸ್ ಕ್ಲಬ್ ಬಡವರಿಗೆ ಅನುಕೂಲವಾಗುವ ಸಮಾಜ ಮುಖಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಯಾವುದೇ ಸಂಸ್ಥೆ ಸದೃಢವಾಗಿರಬೇಕಾದರೆ ಆರ್ಥಿಕವಾಗಿಯೂ ಸದೃಢವಾಗಿರುವುದು ಅವಶ್ಯಕ ಎಂದರು.ಲಯನ್ಸ್ ಕ್ಲಬ್ನ ಪ್ರಾಂತೀಯ ಅಧ್ಯಕ್ಷ ಎಂ.ಬಿ.ಗೋಪಾಕಲ್ ಗೌಡ ಮಾತನಾಡಿ, ಹಿರಿಯ ಅಧ್ಯಕ್ಷರು, ಸದಸ್ಯರು ನೂತನ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಬೇಕು. ಆಗ ಸಂಸ್ಥೆ ಇನ್ನೂ ಉತ್ತಮ ಕಾರ್ಯಮಾಡಲು ಸಾದ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಉಪ ರಾಜ್ಯಪಾಲ ಎಚ್.ಎಂ.ತಾರಾನಾಥ್ ಅವರನ್ನು ಅಭಿನಂದಿಸಲಾಯಿತು. ದಾನಿಗಳಾದ ಡಿ.ರಮೇಶ್ ಅವರು ಕೊಪ್ಪ ತಾಲೂಕಿನ ಹಿರೇಕೊಡಿಗೆ ಲಾಲ್ ಬಹುದ್ದೂರ್ ಪ್ರೌಢ ಶಾಲೆಗೆ ನೀಡಿದ ಶಾಲಾ ಪರಿಕರಣಗಳನ್ನು ವಿತರಿಸಲಾಯಿತು. ಕುದುರೆಗುಂಡಿಯ ಇತಿಹಾಸ್ ಖಾಂಡ್ಯ ಹಾಗೂ ಲಯನ್ಸ್ ಕಟ್ಟಡ ಕಟ್ಟಲು ಕಾರಣರಾದ ನಿರ್ಗಮಿತ ಅಧ್ಯಕ್ಷ ರವಿಚಂದ್ರ, ಕಾರ್ಯದರ್ಶಿ ಕೃಷ್ಣಯ್ಯ ಆಚಾರ್, ಖಜಾಂಚಿ ಜಾನಕೀ ರಾಂ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.