ಗ್ರಾಪಂ ಅಧ್ಯಕ್ಷರು ಉಡಾಫೆ ಮಾತನಾಡುದು ಬಿಡಿ

KannadaprabhaNewsNetwork |  
Published : Jan 25, 2025, 01:03 AM IST
ಹೊಸದುರ್ಗ ತಾಲೂಕಿನ ಹೊಸುರಾಳ್‌ ಹಾಗೂ ಕಪ್ಪನಾಯಕನಹಳ್ಳಿ ಗ್ರಾಮದಲ್ಲಿ ಬಹುಗ್ರಾಮ ಯೋಜನೆಯಡಿ ಭದ್ರಾ ಜಲಾಶಯದಿಂದ ಹೊಸದುರ್ಗ ಪಟ್ಟಣ ಮತ್ತು ತಾಲೂಕಿನ 346 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯ ಹಂತ -2 ರ ಕಾಮಗಾರಿಗೆ ಶಾಸಕ ಬಿಜಿ ಗೋವಿಂದಪ್ಪ  ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಹೊಸದುರ್ಗ ತಾಲೂಕಿನ 346 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯ ಹಂತ -2 ರ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

ಕುಡಿವ ನೀರು ಸರಬರಾಜು ಯೋಜನೆ ಹಂತ-2 ರ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಕನ್ನಡಪ್ರಭ ವಾರ್ತೆ ಹೊಸದುರ್ಗ

ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಬಗ್ಗೆ ಗ್ರಾಪಂ ಅಧ್ಯಕ್ಷರು ಉಡಾಫೆ ಮಾತನಾಡುವುದನ್ನು ಬಿಡಿ, ನಾನು ಭಂಡ ಶಾಸಕನಾಗಿರುವುದರಿಂದ ತರೀಕೆರೆ ತಾಲೂಕಿನ ಜನರಲ್ಲಿ ಬೊಗಸೆ ವೊಡ್ಡಿ ನೀರು ಕೇಳಿ ತಂದಿದ್ದೇನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ಶುಕ್ರವಾರ ತಾಲೂಕಿನ ಹೊಸುರಾಳ್‌ ಹಾಗೂ ಕಪ್ಪನಾಯಕನಹಳ್ಳಿ ಗ್ರಾಮದಲ್ಲಿ ಬಹುಗ್ರಾಮ ಯೋಜನೆಯಡಿ ಭದ್ರಾ ಜಲಾಶಯದಿಂದ ಹೊಸದುರ್ಗ ಪಟ್ಟಣ ಮತ್ತು ತಾಲೂಕಿನ 346 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯ ಹಂತ-2 ರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಳೆದ ಅವಧಿಯಲ್ಲಿ ಶಾಸಕನಾಗಿದ್ದಾಗ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಿಸಿದಾಗ ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದ ಹಿನ್ನಲೆಯಲ್ಲಿ ತರೀಕೆರೆ ತಾಲೂಕಿನ 70 ಗ್ರಾಮ, ಅಜ್ಜಂಪುರ ತಾಲೂಕಿನ 102 ಗ್ರಾಮಗಳಿಗೆ ನೀರು ಕೊಟ್ಟು ನಮ್ಮ ತಾಲೂಕಿನ 346 ಹಳ್ಳಿಗಳಿಗೆ ಶುದ್ಧ ನೀರು ಬರಲಿದ್ದು ಈ ಕಾಮಗಾರಿಯನ್ನು 2 ಹಂತದಲ್ಲಿ ನಡೆಸಲಾಗುತ್ತಿದೆ. ಸುಮಾರು 580 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಲಕ್ಕುವಳ್ಳಿ ಜಲಾಶಯದಲ್ಲಿ ಬಳಿ 80 ಲಕ್ಷ ಲೀಟರ್‌ ಸಾಮರ್ಥ್ಯದ ನೀರು ಸಂಗ್ರಹಣದ ಘಟಕದ ನಿರ್ಮಾಣ ಕಾರ್ಯ ಪ್ರಾರಂಭಗೊಂಡಿದ್ದು ಡ್ಯಾಂ ಬಳಿ 40 ಲಕ್ಷ, ಸಕ್ಕೆ ಬಳಿ 20 ಲಕ್ಷ, ಗಡಿ ಅಹಮದ್‌ ನಗರದ ಬಳಿ 28 ಲಕ್ಷ ಹಾಗೂ ಹೊಸದುರ್ಗದ ಡಿಗ್ರಿ ಕಾಲೇಜು ಬಳಿ 20 ಲಕ್ಷ ಲೀಟರ್‌ ಸಾಮರ್ಥ್ಯದ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿದೆ ಎಂದರು.

ತಾಲೂಕಿನ ಎಲ್ಲಾ ಗ್ರಾಪಂ ಸದಸ್ಯರು ತಮ್ಮ ಗ್ರಾಮಗಳಲ್ಲಿ ಪೈಪ್‌ಲೈನ್‌ ಮಾಡಲು ಬಂದಾಗ ಯಾವುದೇ ಅಡೆ ತಡೆ ಮಾಡದೆ ಕೆಲಸ ಮಾಡಿಸಿಕೊಳ್ಳಿ. ಗುತ್ತಿಗೆದಾರರಿಗೆ ಬೇಗ ಕೆಲಸ ಮುಗಿಸಲು ಹೇಳಿದ್ದಾನೆ. ಇದರ ಜೊತೆಯಲ್ಲಿಯೇ ಕೆರೆಗಳಿಗೆ ನೀರು ಹರಿಸುವ ಹಾಗೂ ಹೊಲಗಳಿಗೆ ನೀರು ಕೊಡುವ ಕೆಲಸವೂ ನಡೆಯುತ್ತಿದ್ದು ಈ ಮೂರು ಯೋಜನೆಯನ್ನು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ಸ್ಥಳಿಯ ಗ್ರಾಪಂ ಅಧ್ಯಕ್ಷರು ಹಾಗೂ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!