ಕನ್ನಡಪ್ರಭ ವಾರ್ತೆ ಗೌರಿಬಿದನೂರು
ನಾಯಿ ಕೊಲ್ಲುವ ಯತ್ನ ವಿಫಲ
ಹಲವಾರು ಮಂದಿಯನ್ನು ಕಚ್ಚಿ ಗಾಯಗೊಳಿಸಿದ್ದರಿಂದ ಸ್ಥಳೀಯರು ಸೇರಿ ನಾಯಿಯನ್ನು ಕೊಲ್ಲಲು ಪ್ರಯತ್ನಿಸಿದರು, ಅದು ತಪ್ಪಿಸಿಕೊಂಡು ಬೇರೆ ಬೇರೆ ವಾರ್ಡ್ ಗಳಿಗೆ ಓಡಿ ಹೋಗಿದೆ. ಇದೇ ವೇಳೆ ಗಾಯಗೊಂಡವರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಇನ್ನು ಹಲವು ಮಂದಿ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹಲವರ ಕೈ ಮತ್ತು ಕಾಲಿನ ಭಾಗಕ್ಕೆ ಕಚ್ಚಿದ್ದು,ಅದೃಷ್ಟವಶಾತ್ ಯಾರಿಗೂ ಪ್ರಾಣಪಾಯವಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದರು.ನಗದಲ್ಲಿವೆ 2500 ಬೀದಿ ನಾಯಿ
ಬಿದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಮಕ್ಕಳು, ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಅಂದಾಜು 2500 ಕ್ಕೂ ಅಧಿಕ ಬಿಡಾಡಿ ನಾಯಿಗಳಿವೆ. ತಾಲ್ಲೂಕಿನಾದ್ಯoತ ಒಂದೇ ದಿನದಲ್ಲಿ ನಗರ ಭಾಗದಲ್ಲಿ 17 ಮತ್ತು ಗ್ರಾಮೀಣ ಭಾಗದಲ್ಲಿ 6 ಸೇರಿ ಒಟ್ಟು 23 ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿವೆ. ಹುಚ್ಚು ನಾಯಿ ನಾಗರಿಕರಿಗೆ ಮಾತ್ರವಲ್ಲದೆ ಇತರ ಹಲವು ಜಾನುವಾರೂಗಳಿಗೂ ಕಡಿದಿರುವ ಬಗ್ಗೆ ತಿಳಿದು ಬಂದಿದ್ದು, ಗ್ರಾಮಾದಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.‘ಬಿಡಾಡಿ ನಾಯಿಗಳ ಸೆರೆ ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಟೆಂಡರ್ ಕರೆಯಲಾಗಿದೆ , ಟೆಂಡರ್ ಪ್ರಕ್ರಿಯೆ ಮುಗಿದ ನಂತರ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲಾಗುತ್ತದೆ, ಎಂದು ನಗರಸಭೆ ಎಇಇ ಶಿವಶಂಕರ್ ತಿಳಿಸಿದರು.