ಎಸ್.ಎಂ. ಕೃಷ್ಣರಿಗೆ ಸಾ.ರಾ.ಮಹೇಶ್‌ ನುಡಿ ನಮನ

KannadaprabhaNewsNetwork |  
Published : Dec 23, 2024, 01:00 AM IST
51 | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟೇ ಸಂಕಷ್ಟಗಳು ಎದುರಾದರೂ ಅವುಗಳನ್ನು ನಿಭಾಯಿಸಿ ನಡೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ.

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮ್ಮ ರಾಜಕೀಯ ಜೀವನವನ್ನು ತೆರೆದ ಪುಸ್ತಕದಂತೆ ಬಿಟ್ಟು ಹೋಗಿರುವ ಅವರ ಸಾಧನೆ ಮತ್ತು ತಾಳ್ಮೆ ದೇಶದ ಇತರ ರಾಜಕಾರಣಿಗಳಿಗೆ ಮೂಲ ಮಂತ್ರವಾಗಬೇಕು ಎಂದು ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದರು.

ಪಟ್ಟಣದ ಕೃಷ್ಣ ಮಂದಿರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ. ಕೃಷ್ಣ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಎಷ್ಟೇ ಸಂಕಷ್ಟಗಳು ಎದುರಾದರೂ ಅವುಗಳನ್ನು ನಿಭಾಯಿಸಿ ನಡೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ.

ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಹಾಗೂ ಉತ್ತಮ ಸ್ಥಾನಕ್ಕೆ ಏರಬೇಕಾದರೆ ನಿಷ್ಕಲ್ಮಷ ಮನಸ್ಸು ಇದ್ದರೆ ಮಾತ್ರ ಎಂಬುದಕ್ಜೆ ಉತ್ತಮ ಉದಾಹರಣೆ ದಿ.ಎಸ್.ಎಂ.ಕೃಷ್ಣ ಅವರು ಎಂದು ತಿಳಿಸಿದರು.

ಎಸ್.ಎಂ. ಕೃಷ್ಣ ಅವರ ನಿಧನ ಭಾರತದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಠವಾಗಿದ್ದು, ಅಂತಹ ನಾಯಕರ ಸಂತತಿ ಭವಿಷ್ಯದಲ್ಲಿ ಹೆಚ್ಚಾಗಿ ಬೆಳೆಯಲಿ ಎಂದು ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ