ಗಣಿ ಕಂಪನಿಗಳ ದರ್ಪ ವಿರೋಧಿಸಿ ವಿವಿಧ ಸಂಘಟನೆಗಳಿಂದ ಧರಣಿ

KannadaprabhaNewsNetwork |  
Published : Jul 26, 2024, 01:45 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ | Kannada Prabha

ಸಾರಾಂಶ

mines policy against association letter to District commissioner

-ಲಾರಿ ಅವಲಂಬಿತರಿಗೆ ನ್ಯಾಯ ಒದಗಿಸುವಂತೆ ಒತ್ತಾಯ । ಜಿಲ್ಲಾಧಿಕಾರಿಗೆ ಮನವಿ

------

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ಗಣಿಬಾಧಿತ ಪ್ರದೇಶಗಳಾದ ಕಾಗಳಗೆರೆ, ಡಿ.ಮದಕರಿಪುರ, ತಣಿಗೆಹಳ್ಳಿ, ಮುತ್ತುಗದೂರು, ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ 52 ಲಾರಿಗಳನ್ನು ಕೆಲವು ತಿಂಗಳುಗಳ ಕಾಲ ಗಣಿಗಾರಿಕೆಗೆ ಬಳಸಿಕೊಂಡು ಏಕಾಏಕಿ ಹೊರಗಿಟ್ಟಿರುವುದನ್ನು ವಿರೋಧಿಸಿ ಸಿರಿಗೆರೆಯ ಡಿ.ಮದಕರಿಪುರ ಸಮೀಪ ಕಳೆದ ಐದು ದಿನಗಳಿಂದಲೂ ಧರಣಿ ನಡೆಸುತ್ತಿರುವವರು ನ್ಯಾಯ ಒದಗಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಂಜಾರ ಲಂಬಾಣಿ ಸಮಾಜ, ದಲಿತ ಸಂಘರ್ಷ ಸಮಿತಿ, ವಾಲ್ಮೀಕಿ ಸೇನೆ, ಅಂಬೇಡ್ಕರ್ ಸೇನೆ ಜೊತೆಗೂಡಿ ಧರಣಿ ನಡೆಸಲಾಗುತ್ತಿದೆ. ಸ್ಥಳೀಯರಿಗೆ ಕೆಲಸ ಕೊಡಬೇಕೆಂಬ ನಿಯಮವಿದ್ದರೂ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್‌ ಅವರು ಇಲ್ಲಸಲ್ಲದ ಸಬೂಬು ಹೇಳಿ ಐವತ್ತೆರಡು ಕುಟುಂಬಗಳ ಲಾರಿಯನ್ನು ಕೆಲಸಕ್ಕೆ ತೆಗೆದುಕೊಳ್ಳದೆ ದರ್ಪ ತೋರುತ್ತಿದ್ದಾರೆ. ಫೈನಾನ್ಸ್ ಸಾಲ ಪಡೆದು ಲಾರಿ ಖರೀದಿಸಿರುವವರು ಅದಿರು ಸಾಗಾಣಿಕೆ ಮಾಡಲು ಅವಕಾಶವಿಲ್ಲದೆ ಪ್ರತಿ ತಿಂಗಳ ಕಂತಿನ ಹಣ ಮೂವತ್ತು ಸಾವಿರ ರು. ಕಟ್ಟಲು ಪರದಾಡುತ್ತಿದ್ದಾರೆ. ಇದರ ನಡುವೆ ಕುಟುಂಬ ನಿರ್ವಹಣೆ ಮಕ್ಕಳ ಶಿಕ್ಷಣಕ್ಕೂ ಸಂಚಕಾರವಾಗಿದೆ ಎಂದು ನೋವು ತೋಡಿಕೊಂಡರು.

ಗಣಿ ಧೂಳಿಗೆ ಸುತ್ತಮುತ್ತಲಿನ ಬೆಳೆಗಳು ನಾಶವಾಗುತ್ತಿವೆ. ಅನೇಕ ಬಾರಿ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್ ನವರಿಗೆ ಸ್ಥಳೀಯರಿಗೆ ಕೆಲಸ ಕೊಡಿ ಎಂದು ಬೇಡಿಕೊಳ್ಳುತ್ತಿದ್ದರೂ ಹೊರಗಿನವರಿಗೆ ಉದ್ಯೋಗ ಕೊಡುತ್ತಿರುವುದು ಯಾವ ನ್ಯಾಯ?. ಈ ಸಂಬಂಧ ತಾವು ಮಧ್ಯ ಪ್ರವೇಶಿಸಿ 52 ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು. ಜಿಲ್ಲಾ ಬಂಜಾರ ಲಂಬಾಣಿ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್, ಪ್ರಸನ್ನಕುಮಾರ್, ಸುಂದರಮೂರ್ತಿ, ರಾಜಣ್ಣ, ತಿಪ್ಪೇಶ್, ಶ್ರೀನಿವಾಸ್, ಪ್ರಭಾಕರ್, ಉಮಾಪತಿ ಹಾಜರಿದ್ದರು.

------------

ಪೋಟೋ;25 ಸಿಟಿಡಿ2

ಗಣಿಭಾದಿತ ಪ್ರದೇಶಗಳ ಐವತ್ತೆರಡು ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ