ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಅವರು ಶನಿವಾರ ತಾಲೂಕಿನ ಬೇವಿನಕೊಪ್ಪ ಗ್ರಾಮದ ಆನಂದಾಶ್ರಮದಲ್ಲಿ ನಡೆದ ನೂತನ ನಿತ್ಯಕಾರುಣ್ಯ ನಿಲಯದ ನವಗ್ರಹ ಶಾಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಬೇವಿನಕೊಪ್ಪ ಮತ್ತು ಸಂಗೊಳ್ಳಿ ಮಾರ್ಗ ಮಧ್ಯೆ ರಾಯಣ್ಣ ಸೇತುವೆ ನಿರ್ಮಾಣಕ್ಕೆ ₹40 ಕೋಟಿ ಮಂಜೂರು ಮಾಡುವಲ್ಲಿ ಎಚ್.ಕೆ.ಪಾಟೀಲರ ಪಾತ್ರ ಹಿರಿದಾಗಿದೆ. ಅಲ್ಲದೇ ಅಮಟೂರ ಗ್ರಾಮದಲ್ಲಿ ವೀರಕೇಸರಿ ಅಮಟೂರ ಬಾಳಪ್ಪ ಸ್ಮಾರಕ ಭವನ ನಿರ್ಮಿಸುವಲ್ಲಿ ಅವರ ಕೊಡುಗೆ ಅಪಾರ. ಈ ನಿಟ್ಟಿನಲ್ಲಿ ಅವರಿಗೆ ಈ ಗ್ರಾಮಸ್ಥರ ಪರ ಕೃತಜ್ಞತೆ ಸಲ್ಲಿಸಿದರು.
ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು. ಸೋಮನಗೌಡ ಪಾಟೀಲ, ಮಲ್ಲಪ್ಪ ಮುರಗೋಡ, ಮಹಾಂತೇಶ ಮರೇಕ್ಕನವರ, ರಮೇಶ ಜಂಗಲ, ಮಲ್ಲಿಕಾರ್ಜುನ ಪೂಜೇರಿ ಹಾಗೂ ನೂರಾರು ಗ್ರಾಮಸ್ಥರು ಇದ್ದರು. 16ಬಿಎಲ್ಎಚ್2