ಕನ್ನಡಪ್ರಭ ವಾರ್ತೆ ಅರಕಲಗೂಡು
ಕೃಷಿ ಇಲಾಖೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕಿನಲ್ಲಿ ಹೆಚ್ಚು ಮಂದಿ ರೈತರು ಬೆಳೆ ವಿಮೆ ಕಂತು ಪಾವತಿಸಿ ಅಂದಾಜು 700 ಕೋಟಿಗೂ ಅಧಿಕ ಹಣವನ್ನು ಪಡೆದುಕೊಂಡಿದ್ದಾರೆ. ಆದರೆ, ನಮ್ಮ ತಾಲೂಕಿನಲ್ಲಿ ಕೇವಲ 700 ಮಂದಿ ರೈತರು ವಿಮೆ ಮಾಡಿಸಿಕೊಂಡು ಅತೀ ಕಡಿಮೆ ವಿಮೆ ಹಣವನ್ನು ಪಡೆದುಕೊಂಡು ವಂಚನೆಗೊಂಡಿದ್ದಾರೆ. ಇದಕ್ಕೆ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯ ಮನೋಭಾವನೆ ಕಾರಣವಾಗಿದೆ ಎಂದು ಎಚ್ಚರಿಸಿದರು.
ಇನ್ನೂ ಮುಂದೆ ಇಲಾಖೆ ವತಿಯಿಂದ ನೀಡುವ ಕೃಷಿ ಪರಿಕರಗಳು, ಬೀಜ, ಗೊಬ್ಬರ ಇತರೆ ಸವಲತ್ತುಗಳನ್ನು ನೀಡುವ ವೇಳೆಯೇ ವಿಮೆ ಕಂತು ಪಾವತಿಗೆ ಕ್ರಮ ಕೈಗೊಳ್ಳಬೇಕು. ಮೆಕ್ಕೆಜೋಳ, ಭತ್ತ, ರಾಗಿ ಇತರೆ ಬೆಳೆಗಳಿಗೆ ವಿಮೆ ಕಂತು ಪಾವತಿಗೆ ದಿನಾಂಕ ನಿಗದಿಯಾಗಿದೆ. ಬರುವ ಆ.20ರಂದು ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಕರೆಯಲಾಗುವುದು ಎಂದರು.