ನೂತನ ಕಾಂಕ್ರಿಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಗಣ್ಯರು ಉಪಸ್ಥಿತರಿದ್ದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಪಂಚಾಯಿತಿಯ ಇಂದಿರಾ ನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕರಾದ ಎ ಎಸ್ ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ರಸ್ತೆಯ ಅಭಿವೃದ್ಧಿಗಾಗಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಶಾಸಕರು ಅದಕ್ಕಾಗಿ 25 ಲಕ್ಷ ರು. ಅನುದಾನ ಒದಗಿಸಿದ್ದರು. ಇದನ್ನು ಶಾಸಕರು ಸಾರ್ವಜನಿಕರಿಗೆ ಬಳಕೆಗೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ವಲಯ ಅಧ್ಯಕ್ಷ ಕುಶಾಲಪ್ಪ, ಅರುಣ್ ಬೇಬ ಹೇಮಾವತಿ ಅರುಣ್ ಮತ್ತಿತರರು ಉಪಸಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.