ಕನ್ನಡಪ್ರಭ ವಾರ್ತೆ ಗುಡಿಬಂಡೆ
ತಾಲೂಕಿನ ಸೋಮೇನಹಳ್ಳಿ ಹೋಬಳಿ ವ್ಯಾಪ್ತಿಯ ಜಂಬಿಗೇಮರದಹಳ್ಳಿ ಗ್ರಾಮದ ಸ.ನಂ. 130ರಲ್ಲಿ ಸುಮಾರು 98 ಎಕರೆ 37 ಗುಂಟೆ ಜಮೀನಿನ ಪೈಕಿ ಮಂಜೂರಾಗಿರುವ ಜಮೀನು ಬಿಟ್ಟು ಉಳಿದ ಜಮೀನಿನಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಜಾನುವಾರುಗಳನ್ನು ಮೇಯಿಸಿಕೊಳ್ಳಲು ಬಳಸುತ್ತಿದ್ದಾರೆ ಎಂದರು.
ಗಣಿಗಾರಿಕೆಗೆ ಅವಕಾಶ ನೀಡಬೇಡಿಗ್ರಾಮದಲ್ಲಿ ಸುಮಾರು 150ಕ್ಕೂ ಮೇಲ್ಪಟ್ಟು ಮನೆಗಳಿದ್ದು, ಈ ಪೈಕಿ ಬಹುತೇಕರು ಜಾನುವಾರುಗಳನ್ನು ಮೇಯಿಸಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಗ್ರಾಮಸ್ಥರಿಗೆ ಬೇರೆ ಎಲ್ಲಿಯೂ ತಮ್ಮ ಜಾನುವಾರುಗಳನ್ನು ಮೇಯಿಸಲು ಜಾಗವಿಲ್ಲ. ಎಲ್ಲರೂ ಇದೇ ಗೋಮಾಳ ಜಮೀನನ್ನು ನಂಬಿಕೊಂಡಿದ್ದಾರೆ. ಆದರೆ ಕೆಲವು ಭೂಗಳ್ಳರು, ಪಟ್ಟಭದ್ರ ಹಿತಾಸಕ್ತಿಗಳು ಗಣಿಗಾರಿಕೆಯ ಮೂಲಕ ಜಮೀನನ್ನು ಕಬಳಿಸಲು ಹುನ್ನಾರ ನಡೆಸಿದ್ದಾರೆ. ಒಂದು ವೇಳೆ ಇದು ಸತ್ಯವಾದರೇ ಗ್ರಾಮದ ಜಾನುವಾರುಗಳಿಗೆ ಮೇವಿಲ್ಲದೇ ಗ್ರಾಮಸ್ಥರು ಜೀವನ ನಡೆಸಲು ಕಷ್ಟಕರವಾಗುತ್ತದೆ. ಆದ್ದರಿಂದ ಈ ಜಾಗದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.