ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪುರಸಭೆ ಆವರಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ, ಪಿಎಂ ಸ್ವ ನಿಧಿ ಯೋಜನೆ, ಜೀವನ್ ಸುರಕ್ಷಾ, ಈ ಶ್ರಮ, ಜನ್ ಧನ್, ಜನನಿ ಸುರಕ್ಷಾ, ಮಾತೃ ವಂದನ, ಹಾಗೂ ಒಂದು ದೇಶ ಒಂದು ಪಡಿತರ ಚೀಟಿ ಬಗ್ಗೆ ವಿಶೇಷ ಮಾಹಿತಿ ನೀಡುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪಟ್ಟಣ ಏಳು ಕಿಲೋಮೀಟರ್ ಮುಖ್ಯರಸ್ತೆಯನ್ನು ಹೊಂದಿದ್ದು, ಬೀದಿ ಬದಿ ವ್ಯಾಪಾರಿಗಳೇ ರಸ್ತೆಗಳಲ್ಲಿ ಪ್ರಭುತ್ವ ಸಾಧಿಸಿದ್ದಾರೆ. ಅವರು ರಸ್ತೆಗೆ ಕಸ ಹಾಕಬಾರದು. ರಸ್ತೆಯನ್ನು ಒತ್ತುವರಿ ಮಾಡಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಘನತಾಜ್ಯ ನಿರ್ವಹಣೆಗಾಗಿ ನಲ್ಲೂರಿನಲ್ಲಿ ಸಂಸ್ಕರಣಾ ಘಟಕ ನಿಯೋಜನೆ ಮಾಡಲಾಗಿದೆ. ಕಸ ಹಾಕುವ ಬಗ್ಗೆ ಎಂಟು ದೂರುಗಳು ವಿವಿಧ ಶಾಲಾ ಇಲಾಖೆಗಳಿಂದ ಬಂದಿವೆ. ಸ್ವಚ್ಛತೆಗೆ ಆದ್ಯತೆ ನೀಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ವಿಜಯ್ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ ಸಾಲ ಮರುಪಾವತಿಯಲ್ಲಿ ಯಾವುದೇ ನ್ಯೂನ್ಯತೆ ಇಲ್ಲವಾಗಿದೆ, ಶೇಕಡ ೧೦೦ರಷ್ಟು ಕಂತು ಪಾವತಿಯಾಗುತ್ತಿದೆ, ಜೀರೋ ಅಕೌಂಟ್, ಹಾಗೂ ಖಾತೆದಾರರ ವಿಮೆ ಬಗ್ಗೆ ಮಾಹಿತಿ ನೀಡಿದರು.ಪಿಎಂ ಸ್ವ ನಿಧಿ ಯೋಜನೆ ಬಗ್ಗೆ ಜಿಲ್ಲಾಧಿಕಾರಿ ಕೋಮಲ ಮಾತನಾಡಿ, ಚನ್ನರಾಯಪಟ್ಟಣ ತಾಲೂಕಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಶೇಕಡ ೯೮ ರಷ್ಟು ಮಂದಿಗೆ ಸಾಲ ನೀಡಿಕೆಯಾಗಿದೆ ಎಂದರು. ಪುರಸಭೆ ಅಧ್ಯಕ್ಷ ಬನಶಂಕರಿ ರಘು ಮಾತನಾಡಿದರು.