‘ಒಲವಿನ ಸವಾರಿ’ ಕಥಾ ಸಂಕಲನ ಲೋಕಾರ್ಪಣೆ

KannadaprabhaNewsNetwork |  
Published : Sep 26, 2024, 10:15 AM IST
ಒಲವಿನ ಸವಾರಿ ಕಥಾ ಸಂಕಲನ  ಲೋಕಾರ್ಪಣೆ | Kannada Prabha

ಸಾರಾಂಶ

ಹೇಮಂತ್ ಪಾರೇರಾ ರಚಿಸಿರುವ ‘ಒಲವಿನ ಸವಾರಿ’ ಕಥಾ ಸಂಕಲನ ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಲೋಕಾರ್ಪಣೆಗೊಂಡಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಕೃತಿ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಹೇಮಂತ್ ಪಾರೇರಾ ರಚಿಸಿರುವ ‘ಒಲವಿನ ಸವಾರಿ’ ಕಥಾ ಸಂಕಲನ ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಲೋಕಾರ್ಪಣೆಗೊಂಡಿತು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಸಾಹಿತ್ಯ ರಚನೆ ಎಲ್ಲರಿದಲೂ ಸಾಧ್ಯವಿಲ್ಲ. ಯಾರಿಗೆ ಸಾಹಿತ್ಯ ಮನಸ್ಸು ಮತ್ತು ಇಚ್ಛಾಶಕ್ತಿ ಇರುತ್ತದೆಯೋ ಅಂತಹವರು ಮಾತ್ರ ಸಾಹಿತಿಗಳಾಗಲು ಸಾಧ್ಯ ಎಂದರು.

ಹಿರಿಯ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಆಶಯ ನುಡಿಗಳನ್ನಾಡಿ, ಸುಂದರ ಪರಿಸರ ಮತ್ತು ಒಂಟಿತನ ಸಾಹಿತ್ಯ ಹೊರಬರಲು ಪೂರಕ ವಾತಾವರಣವಾಗಿದೆ. ಹೆಚ್ಚಿನವರು ಭ್ರಮೆಯಲ್ಲಿಯೇ ಬದುಕುವುದನ್ನು ಕಾಣಬಹುದು. ಇದರಿಂದಾಗಿ ಬರವಣಿಗೆದಾರರು ಕಡಿಮೆಯಿದ್ದಾರೆ. ಮೊದಲು ಭ್ರಮೆಯಿಂದ ಹೊರಬಂದು ಬರವಣಿಗೆಯತ್ತ ಸಾಗಬೇಕಿದೆ ಎಂದರು.

ಸಾಹಿತಿಗಳು ನಿಂತ ನೀರಾಗದೆ, ಒಂದೇ ರೀತಿಯ ಬರವಣಿಗೆ ಮೈಗಂಟಿಸಿಕೊಳ್ಳುವುದನ್ನು ಬಿಟ್ಟು, ವಿಭಿನ್ನ ರೀತಿಯ ದೃಷ್ಟಿಕೋನದಿಂದ ಬರೆಯಬೇಕು. ಜನರ ಮತ್ತು ವಿಮರ್ಷಕರ ಹೇಳಿಕೆಗಳನ್ನು ಕೇಳಿಸಿಕೊಳ್ಳಲು ಸಿದ್ಧರಾಗಿ ಬರವಣಿಗೆ ಮುಂದುವರೆಸಬೇಕು. ಆಗ ಮಾತ್ರ ಸಾಹಿತಿಗಳಿಂದ ಪರಿಪೂರ್ಣ ಬರವಣಿಗೆ ಹೊರಬರಲು ಸಾಧ್ಯ ಎಂದರು.

ಹಿರಿಯ ಸಾಹಿತಿ ಜಲಾ ಕಾಳಪ್ಪ ಪುಸ್ತಕ ಪರಿಚಯ ಮಾಡಿದರು.

ಲೇಖಕಿ ಎಚ್.ಆರ್. ಪವಿತ್ರ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಮಿಲನಾ ಭರತ್, ಯಡವನಾಡು ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ. ಗಣೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶೇಷ ಅಧಿವೇಶನದಲ್ಲಿ ಬಲ್ಡೋಟಾ ವಿರೋಧಿ ಹೋರಾಟ ಪ್ರಸ್ತಾಪ
ಕೇಂದ್ರ ಸರ್ಕಾರದಿಂದ ಅನುದಾನ ನೀಡಿಕೆಯಲ್ಲಿ ತಾರತಮ್ಯ-ಶಾಸಕ ಮಾನೆ