ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯ ರೈತ ಸಂಘ ಪ್ರತಿಭಟನೆ:
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ರೈತಸಂಘದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸಿದರು.ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ ೩,೫೦೦ ರು. ನಿಗದಿಪಡಿಸಬೇಕು. ಅದೇ ರೀತಿ ದಕ್ಷಿಣ ಕರ್ನಾಟಕ ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ೫ ಸಾವಿರ ರು. ನಿಗದಿಮಾಡಬೇಕು. ಕಾಯಂ ಆಗಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರವನ್ನು ವರ್ಷ ಪೂರ್ತಿ ತೆರೆಯಬೇಕು. ಪಂಜಾಬ್ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ರೈತರ ಎಲ್ಲ ಭತ್ತವನ್ನು ಖರೀದಿಸಬೇಕು. ಈಗಾಗಲೇ ರಾಜ್ಯ ಆಹಾರ ನಿಗಮದಿಂದ ಖರೀದಿ ಮಾಡಲು ಪ್ರಕಟಿಸಿರುವುದನ್ನು ಕೈಬಿಟ್ಟು ಹಿಂದಿನಂತೆ ಮಿಲ್ ಪಾಯಿಂಟ್ ಮುಖಾಂತರ ಖರೀದಿಸುವಂತೆ ಒತ್ತಾಯಿಸಿದರು.
ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಿಂದ ಹಿಂದಿನ ಸರ್ಕಾರವು ಘೋಷಣೆ ಮಾಡಿದ್ದ ೧೫೦ ರು. ಬಾಕಿ ಹಣವನ್ನು ಕೊಡಿಸಲು ಸರ್ಕಾರ ಮುಂದಾಗಬೇಕು. ಪ್ರಸಕ್ತ ಸಾಲಿನಲ್ಲಿ ಸರಬರಾಜು ಮಾಡಿದ ಕಬ್ಬಿನ ಹಣವನ್ನು ಕೂಡಲೇ ಪಾವತಿಸುವಂತೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡುವುದು. ಮದ್ದೂರು ಸೋಮೇಶ್ವರ ಟ್ರೇಡರ್ಸ್ನಲ್ಲಿ ರಸಗೊಬ್ಬರದ ಕಲಬೆರಕೆ ಅವ್ಯವಹಾರದ ತನಿಖೆಯನ್ನು ಪ್ರಾಮಾಣಿಕವಾಗಿ ನಡೆಸಿ, ಟ್ರೇಡರ್ಸ್ ಪರವಾನಗಿ ರದ್ದುಪಡಿಸುವುದರ ಜತೆಗೆ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ರೈತರ ಮೇಲಿರುವ ಎಲ್ಲ ಮೊಕದ್ದಮೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ವರಿಷ್ಠೆ ಸುನೀತಾ ಪುಟ್ಟಣ್ಣಯ್ಯ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಲತಾ ಶಂಕರ್, ಲಿಂಗಪ್ಪಾಜಿ, ಎಂ.ಎಸ್.ವಿಜಯ್ಕುಮಾರ್, ಜಿ.ಎ.ಶಂಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.ಜಿಲ್ಲಾಧಿಕಾರಿ, ತಹಸಿಲ್ದಾರ್ ಅಮಾನತಿಗೆ ಕರವೇ ಆಗ್ರಹ
ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾರ್ಯಕರ್ತರು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿ, ಬಳಿಕೆ ಹೆದ್ದಾರಿಯಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ ಘೋಷಣೆ ಕೂಗಿದರು.
ರೈತರಿಗೆ ಯಾವುದೇ ಅನ್ಯಾಯ ಆಗದಂತೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು. ಕೃಷಿ ಸಚಿವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿರುವುದು ವಿಪರ್ಯಾಸ. ಮೃತರ ಕುಟುಂಬಕ್ಕೆ ೨೫ ಲಕ್ಷ ರು.ಪರಿಹಾರ ನೀಡಬೇಕು. ಜೊತೆಗೆ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.