‘ಪುರ್ಸ ಕಟ್ಟುನೆ: ಇನಿ-ಕೋಡೆ-ಎಲ್ಲೆ’ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಅಂ.ರಾ. ಚಲನಚಿತ್ರೋತ್ಸವಕ್ಕೆ ಆಯ್ಕೆ

KannadaprabhaNewsNetwork |  
Published : Dec 21, 2023, 01:15 AM ISTUpdated : Dec 21, 2023, 01:16 AM IST
ಅಂ.ರಾ.ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಾಚಿತ್ರ | Kannada Prabha

ಸಾರಾಂಶ

ಭಾರತದ ಬೇರೆ ಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಆಯ್ಕೆಯಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

2024ರ ಜನವರಿ 5 ರಿಂದ 9ರ ವರೆಗೆ ಕೇರಳದ ತ್ರಿಶೂರಿನಲ್ಲಿ ನಡೆಯುವ 7ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆಇತ್ತೀಚಿಗೆ ಬಿಡುಗಡೆಯಾದ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ‘ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ’ ಆಯ್ಕೆಯಾಗಿದೆ. ವಿಕಿಪೀಡಿಯ ಫೌಂಡೇಶನ್ ತಯಾರಿಸಿದ ಈ ಸಾಕ್ಷ್ಯಚಿತ್ರದ ನಿರ್ಮಾಣವನ್ನು ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಮಾಡಿದ್ದರು. ಡಾ.ಸುಂದರ ಕೇನಾಜೆ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ.

ಭಾರತದ ಬೇರೆ ಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಆಯ್ಕೆಯಾಗಿದೆ.

ಮಧ್ಯಕಾಲೀನ ಕರ್ನಾಟಕದ ರಹಸ್ಯ ತಾಂತ್ರಿಕ ಪಂಥಗಳ ಪ್ರಭಾವದಿಂದ ಇಂದಿಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಕಂಡುಬರುವ ಒಂದು ಮಹತ್ವದ ಕುಣಿತ ‘ಪುರ್ಸ ಕಟ್ಟುನ’. ಬೆಳ್ತಂಗಡಿ ತಾಲೂಕಿನ ಕುದುರೆಮುಖ ಘಟ್ಟದ ತಳಭಾಗದಲ್ಲಿ ಇಂದಿಗೂ ಪ್ರಚಲಿತವಿರುವ ಈ ಕುಣಿತವು ಸುಗ್ಗಿ ತಿಂಗಳ ಹುಣ್ಣಿಮೆಯ ಆಸುಪಾಸು ದಿನಗಳಲ್ಲಿ ನಡೆಯುತ್ತದೆ. ತುಳು ಭಾಷೆಯನ್ನು ಮಾತನಾಡುವ ಹಲವು ಜನಾಂಗಗಳು ಒಟ್ಟು ಸೇರಿ ನಡೆಸುವ ಈ ಕುಣಿತ ಮೂಲತಃ ಗೌಡ ಸಮುದಾಯದವರು ನಡೆಸುತ್ತಾ ಬಂದದ್ದಾಗಿದೆ. ಆಚರಣೆ, ಮನರಂಜನೆ, ನಂಬಿಕೆ, ವಿಡಂಬನೆ ಮತ್ತು ಸಮನ್ವಯದ ಭಾಗವಾಗಿ ನಡೆಯುವ ಈ ಕುಣಿತದ ಒಳತಿರುಳು ಇದರಲ್ಲಿದೆ. ಒಟ್ಟು 40 ನಿಮಿಷದ ಈ ಸಾಕ್ಷ್ಯಚಿತ್ರ ತುಳುನಾಡಿನಲ್ಲಿ ಪ್ರಚಲಿತವಿದ್ದ ತಾಂತ್ರಿಕ ಪಂಥ ಮತ್ತು ಜನಪದ ಕುಣಿತಕ್ಕೆ ಸಂಬಂಧಿಸಿದ್ದಾಗಿದೆ.

ತುಳುನಾಡಿನ ಘಟನಾವಳಿ ಹಾಗೂ ವಿದ್ವಾಂಸರ ವಿಶ್ಲೇಷಣೆಯೊಂದಿಗೆ ಮೈಸೂರಿನ ಕನ್ನಡಿ ಕ್ರಿಯೇಷನ್ ತಯಾರಿಸಿದ ಈ ಸಾಕ್ಷ್ಯಚಿತ್ರ ಯೂಟ್ಯೂಬ್ ಮತ್ತು ವಿಕಿಮೀಡಿಯ ಕಾಮನ್ಸ್ ಮೂಲಕ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’