ಕಾಯಕದ ಜತೆಗೆ ದಾಸೋಹ ಸಹ ಬಹಳ ಮುಖ್ಯ

KannadaprabhaNewsNetwork |  
Published : Feb 12, 2024, 01:33 AM IST
ಅಅಅ | Kannada Prabha

ಸಾರಾಂಶ

ಕನ್ನಡ ಭವನದಲ್ಲಿ ರಂಗ ಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ನಾಟಕಗಳಿಂದ ಆಗುತ್ತಿದೆ. ಕಾಯಕ ಮಾಡುವವರು ನಿಜವಾದ ಭಕ್ತರು. ಕಾಯಕದ ಜತೆಗೆ ದಾಸೋಹ ಸಹ ಬಹಳ ಮುಖ್ಯ, ಗಳಿಕೆಯಷ್ಟೇ ಬಳಕೆಯೂ ಮುಖ್ಯ ಎಂದು ಶ್ರೀ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಕನ್ನಡ ಭವನದಲ್ಲಿ ರಂಗ ಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು ನೂತನ ರಂಗಸೃಷ್ಟಿ ತಂಡಕ್ಕೆ ಅವರು ಶುಭ ಹಾರೈಸಿದರು.

ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮ ಪ್ರಾಯೋಜಿಸಿದ್ದರು.

ಮಹಾಂತೇಶ ಕವಟಗಿಮಠ ಮಾತನಾಡಿ, ಸಮಾಜಕ್ಕೆ ಸಂಸ್ಕಾರ ನೀಡುವ, ಯುವ ಜನಾಂಗವನ್ನು ಸರಿದಾರಿಗೆ ತರುವ ಕೆಲಸ ನಾಟಕಗಳಿಂದ ಆಗಬೇಕಿದೆ, ಕಾಯಕದೆಡೆಗೆ ದಾರಿ ತೋರಿಸುವ ಕೆಲಸವಾಗಬೇಕಿದೆ ಎನ್ನುತ್ತ, ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ರಂಗಸೃಷ್ಟಿಗೆ ಶುಭ ಕೋರಿದರು.ಹಿರಿಯ ಸಾಹಿತಿ ಡಾ. ರಾಮಕೃಷ್ಣ ಮರಾಠೆ ರಚಿಸಿದ, ಶಿರೀಷ್ ಜೋಶಿ ನಿರ್ದೇಶಿಸಿದ ಈಸಕ್ಕಿಯ ಆಸೆ ನಾಟಕ ಪ್ರದರ್ಶನಗೊಂಡಿತು. ಶರಣಗೌಡ ಪಾಟೀಲ ರಂಗ ವಿನ್ಯಾಸ, ಶಾಂತಾ ಆಚಾರ್ಯ ನೃತ್ಯ ಸಂಯೋಜನೆ, ಮಂಜುಳಾ ಜೋಶಿ ಸಂಗೀತ ನಿರ್ದೇಶನ ಮಾಡಿದ್ದರು. ಲಿಂಗಾಯತ ಮಹಿಳಾ ಸಮಾಜ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.

ಈ ಕಾರ್ಯಕ್ರಮದಲ್ಲಿ ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್, ಉಪಾಧ್ಯಕ್ಷ ಎಂ.ಕೆ.ಹೆಗಡೆ, ರಾಜೇಶ್ವರಿ ಕವಟಗಿಮಠ, ರಾಮಕೃಷ್ಣ ಮರಾಠೆ, ಶಿರೀಷ್ ಜೋಶಿ, ರತ್ಮಪ್ರಭಾ ಬೆಲ್ಲದ, ಶೈಲಜಾ ಭಿಂಗೆ, ನಯನಾ ಗಿರಿಗೌಡರ್, ಕಾವೇರಿ ಖಿಲಾರಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!