ಪೋಕ್ಸೋ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ

KannadaprabhaNewsNetwork |  
Published : Jan 16, 2026, 12:30 AM IST
15ಎಚ್ಎಸ್ಎನ್8 : ಹೊಳೆನರಸೀಪುರದ ಶಿಕ್ಷಕರ ಭವನದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮಕ್ಕಳ ಹಕ್ಕು ರಕ್ಷಣೆ, ಪೋಕ್ಸೋ ಕಾಯಿದೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಆಯೋಜಿಸಿದ್ದ ಕಾರ್ಯಗಾರವನ್ನು ಹಿರಿಯ ನ್ಯಾಯಾದೀಶರಾದ ನಿವೇದಿತಾ ಮಹಾತೇಂಶ್ ಮುನವಳ್ಳಿ ಮಠ್ ಉದ್ಘಾಟಿಸಿದರು.  | Kannada Prabha

ಸಾರಾಂಶ

ಸಮಾಜದಲ್ಲಿ ಕಾನೂನು ಬಾಹಿರವಾಗಿ ನಡೆಯುವ ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಮೇಲೆ ದಬ್ಬಾಳಿಕೆ ಬಗ್ಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ಅನುಷ್ಠಾನಕ್ಕೆ ತಂದಿದ್ದರೂ ಸಹ ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಪೋಕ್ಸೋ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತ ಮಹಾಂತೇಶ್ ಮುನವಳ್ಳಿ ಮಠ್ ಬೇಸರ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಸಮಾಜದಲ್ಲಿ ಕಾನೂನು ಬಾಹಿರವಾಗಿ ನಡೆಯುವ ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಮೇಲೆ ದಬ್ಬಾಳಿಕೆ ಬಗ್ಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ಅನುಷ್ಠಾನಕ್ಕೆ ತಂದಿದ್ದರೂ ಸಹ ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಪೋಕ್ಸೋ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತ ಮಹಾಂತೇಶ್ ಮುನವಳ್ಳಿ ಮಠ್ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ತಾಲೂಕು ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಖಾಸಗಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಗೆ ಮಕ್ಕಳ ಹಕ್ಕು ರಕ್ಷಣೆ, ಪೋಕ್ಸೋ ಕಾಯಿದೆ ಮತ್ತು ಮಾನಸಿಕ ಆರೋಗ್ಯ ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜವನ್ನು ಪಿಡುಗಾಗಿ ಕಾಡುತ್ತಿರುವ ಈ ಸಮಸ್ಯೆ ಕುರಿತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ತರಬೇತಿ ನೀಡುತ್ತಿರುವುದು ಉತ್ತಮ ಕೆಲಸವಾಗಿದೆ. ಶಿಕ್ಷಕರು ನಿಮ್ಮ ಸುತ್ತಮುತ್ತ ಮಕ್ಕಳ ಹಕ್ಕುಗಳು ಉಲ್ಲಂಘನೆ ಆಗುತ್ತಿದ್ದರೆ ಅಥವಾ ಅಪ್ರಾಪ್ತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದರೆ ಅದನ್ನು ತಡೆಗಟ್ಟುವಲ್ಲಿ ನೀವುಗಳು ಪ್ರಮುಖ ಪಾತ್ರ ವಹಿಸುವ ಜತೆಗೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವನ್ನು ಮೂಡಿಸುವಂತೆ ಸಲಹೆ ನೀಡಿದರು.ತಾಲೂಕು ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್‌ ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ನಮ್ಮಗಳ ಕರ್ತವ್ಯ ಆಗಬೇಕಿದೆ, ಜೊತೆಗೆ ಸಮಾಜದಲ್ಲಿ ಅಪ್ರಾಪ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಶಿಕ್ಷಕರುಗಳು ಸೇರಿದಂತೆ ಎಲ್ಲರೂ ತಡೆಗಟ್ಟಬೇಕಿದೆ ಎಂದರು. ಈ ದೌರ್ಜನ್ಯಗಳು ಅಧಿಕಗೊಳ್ಳಲು ಇತ್ತೀಚಿನ ಸೋಷಿಯಲ್ ಮಿಡಿಯಾದ ಯುಟೂಬ್‌ಗಳು ಕಾರಣವಾಗಿದೆ ಎಂದು ಆರೋಪಿಸಿದರು.ಹಿರಿಯ ವಕೀಲ ಎಚ್.ಎಸ್.ಅರುಣ್ ಕುಮಾರ್ ಅವರು ಮಕ್ಕಳ ಹಕ್ಕು ರಕ್ಷಣೆ, ಪೋಕ್ಸೋ ಕಾಯಿದೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿ, ಅಗತ್ಯ ಮಾಹಿತಿ ಹಾಗೂ ಸಲಹೆ ನೀಡಿದರು. ಹಿರಿಯ ನ್ಯಾಯಾಧೀಶರು ಹಾಗೂ ಗಣ್ಯರು ಶಿಕ್ಷಣ ಇಲಾಖೆಯ ಬಿಆರ್‌ಸಿ ಎಂ.ಜಿ.ಪರಮೇಶ್ ಮಡಬಲು ಅವರು ರಚಿಸಿರುವ ೪೨ ವಿಷಯಗಳ ಅಂಶಗಳುಳ್ಳ ಬೆಳಗುವ ಹಣತೆಗಳು ಎಂಬ ಕೃತಿಯನ್ನು ಬಿಡುಗಡೆ ಮಾಡಿದರು.

ಒಂದು ದಿನದ ತರಬೇತಿ ಕಾರ್ಯಕ್ರಮ ಬೆಳಿಗ್ಗೆಯಿಂದ ಸಂಜೆವರೆಗೆ ಏರ್ಪಡಿಸಿದ್ದು ಅದರಲ್ಲಿ ಮಕ್ಕಳ ರಕ್ಷಣಾ ನೀತಿ ಹಾಸನದ ಡಯಟ್‌ನ ಹಿರಿಯ ಉಪನ್ಯಾಸಕ ರುದ್ರೇಶ್, ಮಾನಸಿಕ ಆರೋಗ್ಯದ ಬಗ್ಗೆ ಜಿಲ್ಲಾ ಮಾನಸಿಕ ಆರೋಗ್ಯ ಘಟಕದ ಡಾ. ಕಾರ್ತೀಕ್, ಪೋಕ್ಸೋ ಕಾಯ್ದೆ ಬಗ್ಗೆ ತಾಲೂಕು ಶಿಕ್ಷಣ ಇಲಾಖೆಯ ಸಿಇಒ ಕಾಂತರಾಜಪ್ಪ ಹಾಗೂ ಬಿಆರ್‌ಪಿ ಎಂ.ಜಿ.ಪರಮೇಶ್ ದೈಹಿಕ ದಂಡನೆ ಬಗ್ಗೆ, ಬಿಆರ್‌ಪಿಗಳಾದ ನಿಂಗರಾಜು, ನಾಗರಾಜು, ಋತುಚಕ್ರದ ಮತ್ತು ವೈಯಕ್ತಿಕ ಶುಚಿತ್ವದ ಬಗ್ಗೆ ತಾಲೂಕು ಆರೋಗ್ಯ ಇಲಾಖೆಯ ಭಾನುಶ್ರೀ ಹಾಗು ಹದಿಹರೆಯದ ಸಮಸ್ಯೆಗಳ ಬಗ್ಗೆ ಹಾಸನದ ಡಯಟ್‌ನ ಹಿರಿಯ ಉಪನ್ಯಾಸಕಿ ಗೀತಾ ಅವರು ಉಪನ್ಯಾಸ ನೀಡಿದರು.

ಶಿಕ್ಷಕಿ ಆಶಾ ಅವರು ಪ್ರಾರ್ಥಿಸಿದರು. ಪರಮೇಶ್ ಸ್ವಾಗತಿಸಿದರು. ತಾಲೂಕಿನ ಖಾಸಾಗಿ ಹಾಗೂ ಅನುದಾನಿತ ಶಾಲೆಗಳ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ಶಿಕ್ಷಕ ಶಿಕ್ಷಕಿಯರು ತರಬೇತಿಯ ಉಪಯೋಗ ಪಡೆದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಚೇತನ, ಬಿಇಒ ಸೋಮಲಿಂಗೇಗೌಡ, ಶಿಕ್ಷಣ ಇಲಾಖೆಯ ಇಸಿಒಗಳಾದ ರಾಮಚಂದ್ರು, ಕೇಶವ್, ಸುಜಾತ್ ಆಲಿ, ಡಯಟ್‌ನ ಗೀತಾ ರುದ್ರೇಶ್ ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧಿ ವಿಚಾರಧಾರೆಗಳೇ ಸೇವಾ ಕಾರ್ಯ ಮಾಡಲು ಪ್ರೇರಣೆ: ನಾಡೋಜ ವುಡೇ ಪಿ.ಕೃಷ್ಣ
ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ