
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರೌಢಶಾಲೆಯಲ್ಲಿನ ಹೆಣ್ಣು ಮಕ್ಕಳಲ್ಲಿ ಶೈಕ್ಷಣಿಕವಾಗಿ ಅರಿವು ಮೂಡಿಸುವ ಜತೆಗೆ ಅವರ ಪೋಷಕರು ಹಾಗೂ ಶಿಕ್ಷಕರಲ್ಲೂ ಜಾಗೃತಿ ಮೂಡಿಸುವುದು ‘ಭದ್ರ ಬಾಲ್ಯ’ದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ಶಾಲೆಗೆ ಬರುತ್ತಿರುವ ಹೆಣ್ಣುಮಕ್ಕಳು ದಿಢೀರನೆ ಶಾಲೆಯಿಂದ ಹೊರಗೆ ಉಳಿದರೆ ಅಂತಹ ಮಕ್ಕಳ ಮನೆಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ತೆರಳಬೇಕು. ಶಾಲೆಗೆ ಬರದೆ ಇರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಬೇಕು. ಅಪ್ರಪ್ತಾ ಬಾಲಕಿಯನ್ನು ವಿವಾಹ ಮಾಡಿದರೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸುವ ಬಗ್ಗೆ ಮಾಹಿತಿಯನ್ನು ಪೋಷಕರಿಗೆ ನೀಡಲಾಗುವುದು ಎಂದರು.ಗ್ರಾಮಗಳಲ್ಲಿ ಈಗಾಗಲೇ ಹಕ್ಕು ಕಾವಲು ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಬೇಕು. ಶಾಲೆಯಿಂದ ಹೊರಗುಳಿಯುವ ಹೆಣ್ಣು ಮಕ್ಕಳ ಮನೆಗಳಿಗೆ ನಿರಂತರವಾಗಿ ಭೇಟಿ ನೀಡಬೇಕು. ಅದನ್ನು ತಡೆಯುವ ಸಹಕರಿಸಿದ ವ್ಯಕ್ತಿಗೆ ಪಂಚಾಯಿತಿ ಕಟ್ಟೆಯಲ್ಲಿ ಸನ್ಮಾನಿಸಲಾಗುವುದು. ಹೀಗೆ ಮಾಡುವುದರಿಂದ ಬೇರೆಯವರು ಸಹ ಸ್ವಪ್ರೇರಣೆಯಿಂದ ಇಂತಹ ಕಾರ್ಯಕ್ಕೆ ಕೈ ಜೋಡಿಸಲಿದ್ದಾರೆ ಎಂದು ಹೇಳಿದರು.
ಬದುಕಿನ ಬಗ್ಗೆ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ತಿಂಗಳಿಗೊಮ್ಮೆ ಅವರಿಗೆ ಹಳೆಯ ಸಿನಿಮಾವನ್ನು ತೋರಿಸಲು ಪಟ್ಟಿಯನ್ನು ಸಹ ಸಿದ್ಧಪಡಿಸುವ ಸಂಬಂಧ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿ ಚರ್ಚಿಸಲಾಗುವುದು ಎಂದರು.
ರೈತ ಚೈತನ್ಯ ಕಾರ್ಯಕ್ರಮ ಜಾರಿ
ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ತಡೆಯುವ ಉದ್ದೇಶದಿಂದ ಕೃಷಿ ಇಲಾಖೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಜಾತ ತಿಳಿಸಿದರು.ಜಿಲ್ಲೆಯಾದ್ಯಂತ ಈ ಯೋಜನೆಯನ್ನು ಪ್ರಚುರ ಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಇದರ ಜತೆಗೆ ಸಕಾಲದಲ್ಲಿ ರೈತರಿಗೆ ಬೆಂಬಲ ಬೆಲೆ ನೀಡುವುದು. ಬ್ಯಾಂಕ್ಗಳ ಸಹಕಾರದೊಂದಿಗೆ ರೈತರಿಗೆ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.