ಕನ್ನಡಪ್ರಭ ವಾರ್ತೆ ಹಾಸನ
ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ತಮ್ಮ ವಿವಾದಿತ ನಿವೇಶನವನ್ನು ಮಾರಾಟ ಮಾಡಿಸಿಕೊಡುವಂತೆ ಮಹಿಳೆ ದೇವರಾಜೇಗೌಡ ಬಳಿ ಹೋಗಿದ್ದರು. ಈ ವೇಳೆ ತಾನು ಈ ನಿವೇಶನ ಮಾರಾಟ ಮಾಡಿಸಿಕೊಡುವುದಾಗಿ ನಂಬಿಸಿ ಆಗಾಗ ನನಗೆ ಫೋನ್ ಮಾಡುತ್ತಿದ್ದರು, ವೀಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸುತ್ತಿದ್ದರು. ಒಮ್ಮೆ ಇದೇ ವಿಚಾರವಾಗಿ ಅವರ ಮನೆಗೆ ಹೋಗಿದ್ದಾಗ ನನ್ನನ್ನು ಹೆದರಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದು, ಈ ದೂರಿನನ್ವಯ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನಿರೀಕ್ಷಣಾ ಜಾಮೀನಿಗೆ ಅರ್ಜಿ:ಈ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡ ಹಾಸನದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮೇ.8 ರಂದು ಅರ್ಜಿ ಸಲ್ಲಿಸಿದ್ದಾರೆ. ಇವರ ಈ ಅರ್ಜಿಯ ವಿಚಾರಣೆಯನ್ನು ಮೇ.15 ಕ್ಕೆ ಮುಂದೂಡಲಾಗಿದೆ.
------------------------------------------------
ಕನ್ನಡಪ್ರಭ ವಾರ್ತೆ ಹಾಸನ
ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟಿ ಆಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗೂ ಶರತ್ ಎಂಬುವವರ ಮೇಲೆ ನಕಲಿ ವೀಡಿಯೋ ಹಂಚಿದ ದೂರನ್ನು ವಕೀಲ ಹಾಗೂ ಜೆಡಿಎಸ್ ಮುಖಂಡ ಪೂರ್ಣಚಂದ್ರ ಎಂಬುವವರು ಸೈಬರ್ ಕ್ರೈಂ ಠಾಣೆಯಲ್ಲಿ ಏಪ್ರಿಲ್ 23 ರಂದು ದಾಖಲಿಸಿದ್ದರು. ಹಾಗಾಗಿ ಆರೋಪಿತರು ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅವರ ಅರ್ಜಿಯನ್ನು ತಳ್ಳಿಹಾಕಿತ್ತು. ಆದಾಗ್ಯೂ ಅವರನ್ನು ಬಂಧಿಸಿಲ್ಲ. ಇದರಲ್ಲಿ ಸ್ಥಳೀಯ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಅವರನ್ನು ಬಂಧಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದ್ದರು.
--------------------
ಕನ್ನಡಪ್ರಭ ವಾರ್ತೆ ಹಾಸನ