ಕನ್ನಡಪ್ರಭ ವಾರ್ತೆ ಕುಂದಾಪುರ
ಕಾಲೇಜಿನ ಪದವಿ ತರಗತಿಗೆ ಸೇರ್ಪಡೆಯಾಗುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಬೇಕು ಎನ್ನುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಈ ಶೈಕ್ಷಣಿಕ ವರ್ಷದಿಂದ ಪ್ರಥಮ ವರ್ಷದ ಪದವಿ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಕುಟುಂಬದ ಆರ್ಥಿಕ ಹಿನ್ನೆಲೆ ಹಾಗೂ ನೆರವಿನ ಅವಶ್ಯಕತೆಗಳನ್ನು ಪರಿಗಣಿಸಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳ ಶಿಕ್ಷಣಾಭ್ಯಾಸದ ಖರ್ಚುಗಳನ್ನು ಭರಿಸಲು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ '''''''''''''''' ಶ್ರೀ ಶಾರದಾ ಆಸರೆ '''''''''''''''' ಯೋಜನೆಯಡಿ ದತ್ತು ಸ್ವೀಕಾರ ಮಾಡಿಕೊಳ್ಳಲು ನೆರವು ಪಡೆದುಕೊಳ್ಳಲಾಗುವುದು.ಏ.19 ರ ಭಾನುವಾರದಂದು ಕಾಲೇಜಿನಲ್ಲಿ ನಡೆದ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಭೆಯಲ್ಲಿ ಉದ್ದೇಶಿತ “ಶ್ರೀ ಶಾರದಾ ಆಸರೆ ” ಯೋಜನೆ ಬಗ್ಗೆ ವಿವರವಾಗಿ ಚರ್ಚಿಸಿ ಈ ಶೈಕ್ಷಣಿಕ ವರ್ಷದಿಂದಲೇ ಯೋಜನೆಯನ್ನು ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು, ಭವಿಷ್ಯದ ಶಿಕ್ಷಣಕ್ಕೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.