ಮಠ, ಮಂದಿರಗಳ ಅಭಿವೃದ್ಧಿಗೆ ವಿಶೇಷ ಶ್ರಮ

KannadaprabhaNewsNetwork |  
Published : Feb 17, 2024, 01:15 AM IST
ಫೋಟೋ ಕ್ಯಾಪ್ಸನ್> ಮೂಡಲಗಿ: ವಡೇರಹಟ್ಟಿಯಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ರಂಗ ಮಂದಿರ  ನಿರ್ಮಾಣಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆಯನ್ನು ನೆರವೇರಿಸಿದರು. ಫೋಟೋ ಫೈಲ್ ನಂ> 16ಎಮ್‌ಡಿಎಲ್‌ಜಿ1  | Kannada Prabha

ಸಾರಾಂಶ

ವಡೇರಹಟ್ಟಿ ಮತ್ತು ಸುತ್ತಲಿನ ಗ್ರಾಮಗಳ ಭಕ್ತರಿಗೆ, ಮದುವೆ ಸೇರಿದಂತೆ ಇನ್ನಿತರ ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ರಂಗ ಮಂದಿರ ನಿರ್ಮಾಣ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮೂಡಲಗಿ

ಹಿಂದುಗಳ ಆರಾಧ್ಯದೈವ ಪ್ರಭು ಶ್ರೀರಾಮ ಮಂದಿರ ನಿರ್ಮಾಣವಾಗಿದೆ, ಕಾಶಿ ವಿಶ್ವನಾಥ ಮಂದಿರ, ಉಜ್ಜಯನಿಯ ಮಹಾಕಾಳೇಶ್ವರ ಮಂದಿರ, ಕೇದಾರಿನಾಥ, ಬದ್ರಿನಾಥ ದೇವಸ್ಥಾನದ ಅಭಿವೃದ್ಧಿ ಮಾಡುವ ಮೂಲಕ ಭಾರತೀಯರು ಹೆಮ್ಮೆ ಪಡುವಂತಹ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನದಡಿ ಬನಸಿದ್ದೇಶ್ವರ ದೇವಸ್ಥಾನದ ಹತ್ತಿರ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ವಡೇರಹಟ್ಟಿ ಮತ್ತು ಸುತ್ತಲಿನ ಗ್ರಾಮಗಳ ಭಕ್ತರಿಗೆ, ಮದುವೆ ಸೇರಿದಂತೆ ಇನ್ನಿತರ ಧಾರ್ಮಿಕ, ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ರಂಗ ಮಂದಿರ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶದ ಜನತೆಯ ಮನರಂಜನೆಗೆ ಬಯಲು ರಂಗ ಮಂದಿರಗಳು ಕೇಂದ್ರ ಸ್ಥಾನವಾಗಿದೆ. ಸದಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಬಯಲು ರಂಗ ಮಂದಿರದ ಸದುಪಯೋಗ ಮಾಡಿಕೊಳ್ಳಬೇಕು. ಮೂಡಲಗಿ ತಾಲೂಕಿನಲ್ಲಿಯೂ ಕೂಡ ಮಠ, ಮಂದಿರಗಳ ಅಭಿವೃದ್ಧಿಗೆ ವಿಶೇಷಶ್ರಮ ವಹಿಸಲಾಗುತ್ತದೆ ಎಂದರು.

ಮಾಜಿ ಜಿ.ಪಂ ಸದಸ್ಯ ಮಾರುತಿ ತೋಳಮರಡಿ, ಗ್ರಾ.ಪಂ ಸದಸ್ಯ ಮಾರುತಿ ಸೊಡ್ರಗೋಳ, ರಾಮಣ್ಣ ಕೋಳಿ, ಸಿದ್ದಪ್ಪ ತೋಳಮರಡಿ, ಕೆಂಪಣ್ಣ ನಂದಿ, ಭಗವಂತ ಧರ್ಮಟ್ಟಿ, ಬನಪ್ಪ ಸಿಂತ್ರೆ ಸೇರಿದಂತೆ ದೇವಸ್ಥಾನ ಕಮಿಟಿ ಸದಸ್ಯರು, ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ