ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ಪ್ರಥಮ ದರ್ಜೆ ಕಾಲೇಜಿನ 2023-24 ನೇ ಸಾಲಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಮಾಣಿಕ ದುಡಿಮೆಯಿಂದ ಯಶಸ್ಸು ದೊರೆಯುತ್ತದೆ. ಹಣಬಲದಿಂದ, ವ್ಯಕ್ತಿಯ ಬಲದಿಂದ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಜ್ಞಾನದ ಜತೆ ಸಂಸ್ಕಾರ ಅಗತ್ಯಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವಿ.ವೆಂಕಟೇಶ್ ಮಾತನಾಡಿ, ಯಾವುದೂ ಸುಲಭವಾಗಿ ದೊರೆಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಜೊತೆಗೆ ಒಮ್ಮೆ ಓದಿದ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೇವಲ ಪರೀಕ್ಷೆಗಳು ಸಮೀಪಿಸಿದಾಗ ಮಾತ್ರ ಓದಿದರೆ ಸಾಕಾಗುವುದಿಲ್ಲ. ವರ್ಷಪೂರ್ತಿ ಓದುವುದನ್ನು ಕಲಿಯಬೇಕು. ಜ್ಞಾನದ ಜೊತೆಗೆ ಸಂಸ್ಕಾರವನ್ನು ಕಲಿಯಬೇಕು. ನಾಗರಿಕತೆ ಹಾಗೂ ಮನರಂಜನೆಯ ಹೆಸರಿನಲ್ಲಿ ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿಯಬಾರದು ಎಂದು ಅಭಿಪ್ರಾಯಪಟ್ಟರು.
ದಿನಪತ್ರಿಕೆಗಳನ್ನು ಓದಿ
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸಾಂಸ್ಕೃತಿಕ, ಕ್ರೀಡೆ, ರೆಡ್ಕ್ರಾಸ್, ಎನ್ಎಸ್ಎಸ್, ಎನ್ಸಿಸಿ ಹಾಗೂ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಐಆರ್ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಂಸ ಶ್ರೀ, ಕಸಾಪ ತಾಲೂಕು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಕೆ.ಮಹದೇವ್, ಕ್ರೆಸೆಂಟ್ ಶಾಲೆಯ ಪ್ರಾಂಶುಪಾಲ ತಮೀಮ್ ಅನ್ಸಾರಿ, ಎಆರ್ಎಂ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಮೂರ್ತಿ ಸಾಮ್ರಾಟ್, ಅಕ್ಷರ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ವಿ ಪ್ರಕಾಶ್, ಪ್ರಾಧ್ಯಾಪಕರಾದ ಆದಿನಾರಾಯಣ, ಡಾ.ಶಫೀವುಲ್ಲಾ, ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.