ಕನ್ನಡಪ್ರಭ ವಾರ್ತೆ ಮಾಲೂರು
ಅವರು ಪಟ್ಟಣದ ಪದ್ಮಾವತಿ ಸಂಕೀರ್ಣದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಅಯೋಜಿಸಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಕಾರ್ಯಕ್ರಮ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದರು.
ಸುಜ್ಞಾನ ನಿಧಿ ಯೋಜನೆಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಲಾ ಅವರು ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರು ಪತ್ರಗಳನ್ನು ವಿತರಿಸಿ ಮಾತನಾಡಿ, ಮಕ್ಕಳ ಭವಿಷ್ಯಕ್ಕಾಗಿ ಶ್ರಮಿಸುವ ಪೋಷಕರ ಅಭಿಲಾಷೆಗೆ ಪೂರಕವಾಗಿ ಈ ಸುಜ್ಞಾನ ನಿಧಿ ಯೋಜನೆ ಕಾರ್ಯಕ್ರಮ ನಡೆಯುತಿದೆ. ಇದರ ಉಪಯೋಗವನ್ನು ಪೋಷಕರು ಹಾಗೂ ಮಕ್ಕಳು ಪಡೆದುಕೊಳ್ಳಬೇಕೆಂದರು.
55 ಮಕ್ಕಳಿಗೆ ಶಿಷ್ಯವೇತನ
ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸತೀಶ್ ಮಾತನಾಡಿ ಧಗ್ರಾ ಯೋಜನೆಯ ಪಾಲುದಾರ ಕುಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಯೋಜನೆಯನ್ನು ರೂಪಿಸಿದ್ದು, ನಮ್ಮ ತಾಲೂಕಿನಲ್ಲಿ ಸುಮಾರು ೫೫ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಶಿಷ್ಯವೇತನವನ್ನು ನೀಡಲು ಮಂಜೂರಾತಿ ಆಗಿದೆ ಎಂದರು.ಪುರಸಭೆ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೃಷ್ಣಪ್ಪ, ಸದಸ್ಯರಾದ ವೇಮನ,ಪರಮೇಶ್, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ರಾಮಸ್ವಾಮಿ ರೆಡ್ಡಿ , ಉಮೇಶ್, ಮರಿರಾಜ್, ರವಿಕುಮಾರ್ ಮಾತನಾಡಿದರು. ಯೋಜನೆಯ ಕೃಷಿ ಅಧಿಕಾರಿ ಮಧುರಾಜ್,ಮೇಲ್ವಿಚಾರಕರಾದ ರಮೇಶ್, ನೇತ್ರ, ಕವಿತಾ, ಪುರುಷೋತ್ತಮ್, ಮಂಜುನಾಥ್, ಅದಿ ನಾರಾಯಣ್, ರಂಜಿತಾ, ಲತಾ ಇನ್ನಿತರರು ಇದ್ದರು.