ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಿರಿ

KannadaprabhaNewsNetwork |  
Published : Feb 09, 2024, 01:50 AM IST
ಫೋಟೊ: 08 ರಾಯಬಾಗ 3ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಕೆಎಲ್‌ಇ ಕಾಲೇಜ್‌ದಲ್ಲಿ ನಡೆದ ಬೃಹತ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿರುವ ಶಾಸಕ ಡಿ.ಎಮ್.ಐಹೊಳೆ. ಅಪ್ಪಾಸಾಹೇಬ ಕುಲಗುಡೆ, ತಾತ್ಯಾಸಾಹೇಬ ಕಾಟೆ, ಭರತೇಶ ಬನವಣೆ, ಮಲ್ಲಪ್ಪ ಮೈಶಾಳೆ, ರಾಮಚಂದ್ರ ನಿಶಾನದಾರ, ಬಸವರಾಜ ಡೊಣವಾಡೆ ಇದ್ದರು.  | Kannada Prabha

ಸಾರಾಂಶ

ಕೆಎಲ್‌ಇ ಸಂಸ್ಥೆ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿದ್ದು, ಎಲ್ಲರಿಗೂ ಒಳ್ಳೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ ರಾಯಬಾಗ

ಪಟ್ಟಣದ ಕೆಎಲ್‌ಇ ಕಾಲೇಜ್‌ನಲ್ಲಿ ಫೆ.13 ರಂದು ಅಮೀತ ಕೋರೆ ಅಭಿಮಾನ ಬಳಗದ ಸಹಯೋಗದೊಂದಿಗೆ ಆಯೋಜಿಸಿರುವ ಬೃಹತ ಆರೋಗ್ಯ ಉಚಿತ ತಪಾಸಣೆ ಶಿಬಿರದ ಸದುಪಯೋಗ ಕ್ಷೇತ್ರದ ಜನರು ಪಡೆಯಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ಗುರುವಾರ ಪಟ್ಟಣದ ಕೆಎಲ್‌ಇ ಮಲಗೌಡ ಪಾಟೀಲ ಕಾಲೇಜ್‌ದಲ್ಲಿ ನಡೆದ ಬೃಹತ್‌ ಆರೋಗ್ಯ ಉಚಿತ ತಪಾಸಣೆ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿದ್ದು, ಎಲ್ಲರಿಗೂ ಒಳ್ಳೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿದೆ. ಶಿಬಿರದಲ್ಲಿ ನುರಿತ ಮತ್ತು ಬಹು ಅಂಗಾಂಗ ಜೋಡಣೆ ತಜ್ಞರು ಭಾಗವಹಿಸುವುದರಿಂದ ಎಲ್ಲ ರೀತಿಯ ಚಿಕಿತ್ಸೆ ದೊರಕಲಿದೆ ಎಂದರು.

ಸಿಬಿಕೆಎಸ್‌ಎಸ್‌ಕೆ ನಿರ್ದೇಶಕ ಭರತೇಶ ಬನವಣೆ ಮಾತನಾಡಿ, ಪಟ್ಟಣದಲ್ಲಿ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ ಮತ್ತು ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿರುವ ಬೃತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಉಚಿತ ಔಷದ್ಯೋಪಚಾರ, ಬಸ್ ಸೇವೆ ಮತ್ತು ಊಟದ ವ್ಯವಸ್ಥೆ ಇರುವುದರಿಂದ ಗ್ರಾಮೀಣ ಭಾಗದ ಜನರು ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕೆಎಲ್‌ಇ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಅಲ್ಲಂಪ್ರಭು ಪ್ರಸ್ತಾವಿಕವಾಗಿ ಮಾತನಾಡಿ, ಆರೋಗ್ಯ ಶಿಬಿರ ಫೆ.13 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ರವರೆಗೆ ನಡೆಲಿದೆ. ಶಿಬಿರದಲ್ಲಿ ಪಾಲ್ಗೊಳ್ಳುವವರು ತಮ್ಮ ಆಧಾರ ಕಾರ್ಡ, ರೇಷನ್ ಕಾರ್ಡ ಮತ್ತು ಆಧಾರ ಲಿಂಕ್ ಇರುವ ಮೊಬೈಲ್ ಹೊಂದಿರುವವರಿಗೆ ಆಯ್ಯುಷಮಾನ್ ಕಾರ್ಡಗಳನ್ನು ಮಾಡಿಕೊಡಲಾಗುವುದು ಎಂದರು.

ಸ್ಥಳೀಯ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಸಿಬಿಕೆಎಸ್‌ಎಸ್‌ಕೆ ಉಪಾಧ್ಯಕ್ಷ ತಾತ್ಯಾಸಾಬ ಕಾಟೆ, ಮಲ್ಲಪ್ಪ ಮೈಶಾಳೆ, ರಾಮಚಂದ್ರ ನಿಸಾನದಾರ, ಬಸವರಾಜ ಡೊಣವಾಡೆ, ಆರ್.ಕೆ.ಪಾಟೀಲ, ಡಾ.ಕಾಡು ಗುಂಡಕಲ್ಲೆ, ಸದಾನಂದ ಹಳಿಂಗಳಿ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪೂರೆ, ರಾಮಚಂದ್ರ ಕಾಟೆ, ಲಗಮಣ್ಣಾ ಪಾಟೀಲ, ಅಪ್ಪಾಸಾಬ ಮೈಶಾಳೆ, ಗಂಗಧಾರ ಮೈಶಾಳೆ, ಅಮೀತ ಜಾಧವ, ಕಲ್ಲಪ್ಪ ನಿಂಗನೂರೆ ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!