ಕನ್ನಡಪ್ರಭ ವಾರ್ತೆ ಕಾಗವಾಡತಾಲೂಕಿನ ಐನಾಪುರ ಪಟ್ಟಣದಲ್ಲಿ ಮಕರ ಸಂಕ್ರಮಣ ದಿನದಿಂದ ಸತತ ಐದು ದಿನಗಳವರೆಗೆ ಜರುಗಲಿರುವ ಜಾತ್ರಾ ಮಹೋತ್ಸವವನ್ನು ಕೋವಿಡ್-19 ಮಾರ್ಗಸೂಚಿಯಂತೆ ಜಾತ್ರಾ ಮಹೋತ್ಸವಕ್ಕೆ ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ತಹಸೀಲ್ದಾರ ರಾಜೇಶ ಬುರ್ಲಿ ಹೇಳಿದರು.ಶನಿವಾರ ಐನಾಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವದ ಸಿದ್ದತೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಬಂದೋಬಸ್ತ ನಿರ್ವಹಣೆಗಾಗಿ ಅಗತ್ಯವಿರುವ ಕಡೆ ಬ್ಯಾರಿಕೇಡ್ಗಳ ವ್ಯವಸ್ಥೆ, ವಾಹನ ಸಂಚಾರ ಹಾಗೂ ನಿಲುಗಡೆ, ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ರೋಗ ಬಾರದಂತೆ ಔಷದೋಪಚಾರ, ಚುಚ್ಚುಮದ್ದುಗಳನ್ನು ಹಾಕಿಸುವ ಕ್ರಮ ಜರುಗಿಸುವಂತೆ ತಿಳಿಸಿದ ಅವರು ಪ್ರಾಣಿಹಿಂಸೆ ಆಗದಂತೆ ನೋಡಿಕೊಳ್ಳಬೇಕು. ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತೆ ಹೇಳಿದರು.
ಈ ವೇಳೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಪುಠಾಣಿ, ಡಾ.ಅಭಿನಂದನ ಪಾಟೀಲ, ಜಾತ್ರಾ ಕಮೀಟಿ ಅಧ್ಯಕ್ಷ ಸುಭಾಷ ಪಾಟೀಲ, ಉಪಾಧ್ಯಕ್ಷ ರಾಜುಗೌಡ ಪಾಟೀಲ, ಪಟ್ಟಣ ಪಂಚಾಯತ್ ಸದಸ್ಯ ಅರುಣ ಗಾಣಿಗೇರ, ಸಂಜಯ ಬಿರಡಿ. ಮುಖಂಡ ದಾದಾ ಪಾಟೀಲ, ರಾಜೇಂದ್ರ ಪೋತದಾರ, ಬಾಹುಬಲಿ ಕುಸನಾಳೆ, ದಾದಾ ಜಂತೆನ್ನವರ, ಹರ್ಷವರ್ದನ ಪಾಟೀಲ, ಅಮಗೌಡ ವಡೆಯರ, ಸುರೇಶ ಅಡಿಸೇರಿ, ಸೋಮಲಿಂಗ ವಡಿಯರ ಸೇರಿ ಅನೇಕರು ಇದ್ದರು.