ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಆಡಳಿತ ಕನ್ನಡಿಗರ ಬದುಕಿಗೆ ಶಾಪವಾಗಿದೆ. ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೂ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ಜನಾದೇಶಕ್ಕೆ ಮಾಡಿದ ದ್ರೋಹನೆಮ್ಮದಿಯಿಂದ ಬದುಕಲು ಅಥವಾ ಸಾಯಲು ಸಹ ಬಿಡದ ಕ್ರೂರ ಭ್ರಷ್ಟತೆ ರಾಜ್ಯವನ್ನು ಆವರಿಸಿದೆ. ರಾಜ್ಯ ಇಂದು ಆರ್ಥಿಕ ದಿವಾಳಿ, ಶೂನ್ಯ ಅಭಿವೃದ್ಧಿ, ಕುಸಿದ ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೋಲೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದ ನರಳುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಮತ್ತು ರಾಜ್ಯಕ್ಕೆ ತಂದ ಅಪಚಾರ ವಾಗಿದೆ ಎಂದರು. ಕಾಂಗ್ರೆಸ್ ಸರ್ಕಾರ ಎಂದರೆ ಭ್ರಷ್ಟಾಚಾರದ ಕೂಪ. ಇದು ಸ್ಪಷ್ಟವಾಗಿ ‘ಕಮಿಷನ್ ಸರ್ಕಾರ’. 60 ಪರ್ಸೆಂಟ್ ಸರ್ಕಾರ. ಪ್ರತಿಯೊಂದು ಯೋಜನೆಯಲ್ಲೂ, ಪ್ರತಿ ಟೆಂಡರ್ನಲ್ಲೂ ಕಮಿಷನ್ ದಂಧೆ ನಡೆಯುತ್ತಿದೆ. ಸಿ.ಎಂ.ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯವನ್ನು ಕಾಂಗ್ರೆಸ್ ಪಕ್ಷದ "ಎಟಿಎಂ " ಆಗಿ ಪರಿವರ್ತಿಸಿದ್ದಾರೆ. ಕರ್ನಾಟಕದಲ್ಲಿ ಲೂಟಿ ಮಾಡಿದ ಕೋಟ್ಯಂತರ ಹಣವನ್ನು ಪಕ್ಷದ ಹೈಕಮಾಂಡ್ಗೆ ಮತ್ತು ಇತರ ರಾಜ್ಯಗಳ ಚುನಾವಣೆಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆಂದರು.
ಈ ಸರ್ಕಾರ ಸಂವಿಧಾನದ ಆಶಯಗಳಿಗೆ ದ್ರೋಹ ಬಗೆಯುತ್ತಿದೆ. ಉಪಮುಖ್ಯಮಂತ್ರಿಗಳೇ ಬಹಿರಂಗವಾಗಿ ಸಂವಿಧಾನ ಬದಲಾಗಲಿದೆ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರ ಓಲೈಕೆಗಾಗಿ ಸಂವಿಧಾನವನ್ನೇ ಅಪಮಾನಿಸಿದ್ದಾರೆ. ಪಹಲ್ಗಾಮ್ ದಾಳಿಯಂತಹ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಸಚಿವರು ಅಸಂವೇದನಾಶೀಲ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕರು ಸೈನಿಕರಿಗೆ ಅಪಮಾನ ಮಾಡುವ ಮೂಲಕ ದೇಶದ್ರೋಹದ ಪರಮಾವಧಿ ತಲುಪಿದ್ದಾರೆ. ಪಾಕಿಸ್ತಾನದಲ್ಲಿ ಸಿದ್ದರಾಮಯ್ಯ ''''ವಝೀರ್-ವಿ-ಆಲ'''' ಎಂದೇ ಫೇಮಸ್ ಆಗಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯವು ಅರಾಜಕತೆಯ ಕೂಪವಾಗಿ ಮಾರ್ಪಟ್ಟಿದೆ. ಅಭದ್ರತೆಯಲ್ಲಿ ಜನಸಾಮಾನ್ಯರ ನಿತ್ಯ ಬದುಕು ಸಾಗಿಸುವಂತಾಗಿದೆ ಎಂದರು.
ಸುದ್ದಿಗೊಷ್ಟಿಯಲ್ಲಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಬಿ.ಮುರಳಿ, ಹೆಚ್.ಎಸ್.ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಆರ್.ಹೆಚ್.ಎನ್. ಅಶೋಕ್, ಸಹ ವಕ್ತಾರ ದೇವಸ್ಥಾನದ ಹೊಸಹಳ್ಳಿ ರಾಮಣ್ಣ, ವಕ್ತಾರ ಮಧುಚಂದ್ರ ಇದ್ದರು.