ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಮರೆತು, ಕೇವಲ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ವರ್ತನೆಯೇ ಅದರ ನಿಜವಾದ ಜನವಿರೋಧಿ ಮುಖವನ್ನು ಬಯಲು ಮಾಡಿದೆ ಎಂದರು.
ಜಿಲ್ಲೆಯ ಅಭಿವೃದ್ಧಿ ಕಡೆಗಣನೆಪಂಚ ಗ್ಯಾರಂಟಿಗಳನ್ನು ತೋರಿಸಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜಧಾನಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಒಂದು ಮುನ್ನೋಟವಿಟ್ಟು ಕೊಂಡು ಬೇರೆ ಬೇರೆ ರಾಜ್ಯಗಳ ರಾಜಧಾನಿಗಳ ಅಕ್ಕಪಕ್ಕದ ಜಿಲ್ಲೆಗಳನ್ನು ಆಭಿವೃದ್ದಿ ನಾಡಿದಂತೆ ಕೈಗಾರಿಕೆ, ಟೌನ್ ಶಿಫ್, ಸ್ಯಾಟಲೈಟ್ ಸಿಟಿಯಂತೆ ಅಭಿವೃದ್ದಿ ಪಡಿಸಬಹುದಿತ್ತು ಎಂದರು.
ಸರ್ಕಾರದ ನಿಜವಾದ ಬಣ್ಣ
ಕಾನೂನು ರಕ್ಷಿಸಬೇಕಾದ ಕಾಂಗ್ರೆಸ್ ಸರ್ಕಾರವೇ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಓಲೈಸುತ್ತಿದೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆದಿರುವುದು, ಹಾಗೂ ಡಿ.ಜಿ. ಹಳ್ಳಿ-ಕೆ.ಜಿ. ಹಳ್ಳಿ ಗಲಭೆಯಲ್ಲಿ ಗಲಭೆಕೋರರ ತುಷ್ಟಿಕರಣ ಮಾಡಿದ್ದೇ ಕಾಂಗ್ರೆಸ್ಸಿನ ಅಸಲಿ ಮುಖವಾಗಿದೆ. ಕರ್ನಾಟಕದಲ್ಲಿ ಪೊಲೀಸ್ ಠಾಣೆಗಳು ಇಂದು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ. ಸರ್ಕಾರದ ವಿರುದ್ಧ ದನಿ ಎತ್ತುವವರ ಮೇಲೆ ಎಫ್ಐಆರ್ ಅಸ್ತ್ರ ಪ್ರಯೋಗಿಸಲಾಗುತ್ತಿದೆ ಎಂದು ಆರೋಪಿಸಿದರು.
ಕಲಬುರಗಿಯಲ್ಲಿ ವಾಕಿಸ್ತಾನ ಧ್ವಜ ತುಳಿದ ಹಿಂದೂ ಕಾರ್ಯಕರ್ತರ ಮೇಲೆ ಸರ್ಕಾರದ ಸೂಚನೆಯಂತೆ ಪ್ರಕರಣ ದಾಖಲಿಸಿರುವ ರಾಜ್ಯ ಪೊಲೀಸ್ ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದು, ಜನತೆ ನಿತ್ಯ ಭಯದಲ್ಲಿ ಬದುಕುತ್ತಿದ್ದರೆ, ನನಗೇನೂ ಮಾಹಿತಿ ಇಲ್ಲ, ಅವರಾಧ ನಡೆದರೆ ನನಗೇನೂ ಗೊತ್ತಿಲ್ಲ ಎಂದು ಜಾರಿಕೊಳ್ಳುತ್ತಾರೆ ನಮ್ಮ ಗೃಹ ಸಚಿವರು. ಅತ್ಯಾಚಾರ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ದೊಡ್ಡ ನಗರಗಳಲ್ಲಿ ಇದೆಲ್ಲಾ ಸಾಮಾನ್ಯ ಎನ್ನುವ ಇಂತಹ ಬೇಜವಾಬ್ದಾರಿ ಮಂತ್ರಿಗಳಿಂದ ರಾಜ್ಯಕ್ಕೆ ರಕ್ಷಣೆ ಸಿಗುತ್ತದೆಂಬ ಯಾವ ಭರವಸೆಯೂ ಉಳಿದಿಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ್, ಕೆ.ಬಿ.ಮುರಳಿ, ಮಧುಸೂಧನ ನಾರಾಯಣ, ಮುಖಂಡರಾದ ಎ.ವಿ.ಬೈರೆಗೌಡ, ಅಶೋಕ್ ಕುಮಾರ್, ಮಧುಚಂದ್ರ, ಶ್ರೀನಾಥ್, ಎಬಿಕೆ ಬಾಲು ಇದ್ದರು.