ಆಳ್ವಾಸ್ ಕಾಲೇಜ್‌ ಹಿಂದಿ ವಿಭಾಗದಿಂದ ‘ಉಮಂಗ್-೨೦೨೫’

KannadaprabhaNewsNetwork |  
Published : Mar 13, 2025, 12:48 AM IST
32 | Kannada Prabha

ಸಾರಾಂಶ

ಮೂಡುಬಿದಿರೆ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ''ಉಮಂಗ್-೨೦೨೫'' ಅನ್ನು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕ ರಾಯಿ ರಾಜಕುಮಾರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

‘ಉಮಂಗ್ ಮೇ ಮತ್ ಫಾಸ್ ಯೇ ದುನಿಯಾ ಕಾ ಖೇಲ್ ಹೇ’ (ಅತ್ಯುತ್ಸಾಹದಲ್ಲಿ ಮುಳುಗದಿರು, ಇದು ಜಗದ ಆಟ) ಎಂದು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ ಹಿಂದಿ ಶಿಕ್ಷಕ ರಾಯಿ ರಾಜಕುಮಾರ್ ಹೇಳಿದರು.

ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ''''ಉಮಂಗ್-೨೦೨೫'''' ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಎಲ್ಲಾ ಭಾಷೆಯು ನಮಗೆ ಉಪಯೋಗಿಯಾಗಿರುತ್ತೆ. ಅದು ಇಂಗ್ಲಿಷ್, ಹಿಂದಿ, ಕನ್ನಡ ಯಾವುದೇ ಭಾಷೆ ಆಗಲಿ. ಅವುಗಳನ್ನು ಬಳಸಿಕೊಂಡು ನಮ್ಮನು ನಾವು ಬೆಳಸಿಕೊಳ್ಳಬೇಕಾದ ಅವಶ್ಯಕತೆ ಇದೆ’ ಎಂದರು.

ಉಮಂಗ್ ಎಂದರೆ ಖುಷಿ, ಆನಂದ, ಉಲ್ಲಾಸ, ಅತ್ಯುತ್ಸಾಹ. ಇಂತಹ ಕರ‍್ಯಕ್ರಮಗಳ ಅವಶ್ಯಕತೆ ಇದೆ, ಸುಖದ ಅನುಭವ ಎಲ್ಲರಿಗೂ ಸಿಗಬೇಕು ಅದುವೇ ಉಮಂಗ್ ಎಂದರು.

ಯಾವುದೇ ಕೆಲಸವಾಗಲಿ, ಅದನ್ನು ಮನಸ್ಸಿನಿಂದ ಮಾಡಿದಾಗಲೇ ಉತ್ಸಾಹ. ಖುಷಿ ಎನ್ನುವಂತದ್ದು, ಈ ಕರ‍್ಯಕ್ರಮದ ಮುಖ್ಯ ಉದ್ದೇಶ. ನಮ್ಮ ಬದುಕನ್ನು ನಾವು ಎಷ್ಟರ ಮಟ್ಟಿಗೆ ಉಪಯೋಗಿಸಿಕೊಳ್ಳುತ್ತೇವೆ. ಅಷ್ಟರ ಮಟ್ಟಿಗೆ ನಾವು ಬೆಳೆಯಲು ಸಾಧ್ಯವಿದೆ’ ಎಂದರು.

ಝೆಂಕೊಐಒ ಸಂಸ್ಥೆಯ ಸಿಇಒ ಡಿಂಪಲ್ ರ‍್ಮಾರ್ ಮಾತನಾಡಿ, ‘ಹಿಂದಿ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಾಂಸ್ಕೃತಿಕ ಗುರುತು ಹಾಗೂ ಘನತೆಯಾಗಿದೆ. ಭಾಷೆಯಯೊಂದಿಗೆ ಅಭಿವೃದ್ಧಿ ಹೊಂದುವ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತದೆ. ಹಿಂದಿ ನಮ್ಮನು ಪ್ರೀತಿ ಸೂತ್ರದಲ್ಲಿ ಒಂದಾಗಿಸುತ್ತದೆ. ಇದು ಸಂವಹನದ ಮಾದ್ಯಮವಷ್ಟೇ ಅಲ್ಲ. ಇದು ಸಂವೇದನೆಯ ಆತ್ಮವಾಗಿದೆ. ಭಾಷೆ ಗಟ್ಟಿಯಾಗಿದ್ದರೆ, ಆ ಭಾಷಿಕರ ಯೋಚನೆಯೂ ದೃಢವಾಗಿರುತ್ತದೆ. ನಿಮಗೆ ಜೀವನದಲ್ಲಿ ದೊಡ್ಡ ಸವಾಲುಗಳು ಬರಲಿವೆ. ನಾವು ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದರು.

ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ ಎನ್ ಪಿ ನಾರಾಯಣ ಶೆಟ್ಟಿ ಮಾತನಾಡಿ, ಭಾಷೆ ಮನುಷ್ಯನ ವಿಕಾಸಕ್ಕೆ ದಾರಿ ಒದಗಿಸುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಧೃತಿಗೆಡದೆ, ಧರ‍್ಯದಿಂದ ಎದುರಿಸಬೇಕು ಎಂದರು.

‘ಉಮಂಗ್-೨೦೨೫'''' ರ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದರು. ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿವಿಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು.

ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಹಿಂದಿ ವಿಭಾಗದ ಸಂಯೋಜಕ ಡಾ. ದತ್ತಾತ್ರೇಯ ಹೆಗ್ಡೆ, ಹಿರಿಯ ವಿದ್ಯರ‍್ಥಿಗಳಾದ ತನೀಷಾ, ವಿದ್ಯಾರ್ಥಿ ಸಂಯೋಜಕರಾದ ಖುಷಿ ಕುಡಾಲ್ಕರ್ ಮತ್ತು ಜೊನಾಥನ್ ಡಿ’ಸೋಜಾ ಇದ್ದರು. ವಿದ್ಯಾರ್ಥಿನಿ ವಿನೆಟ್ ವಾಸ್, ವೃದ್ಧಿ ರೈ ನಿರೂಪಿಸಿದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ