ಕನ್ನಡಪ್ರಭ ವಾರ್ತೆ ಮುಧೋಳ
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಬಾಗಲಕೋಟ, ಮುಧೋಳ ಎಸ್.ಆರ್ ಕಂಠಿ ಕಾಲೇಜಿನ ಐಕ್ಯೂಎಸಿ ಕ್ರೈಟೇರಿಯಾ -7ರ ಅಡಿಯಲ್ಲಿ ತಾಲೂಕಿನ ಮೆಟಗುಡ್ಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮತ ಚಲಾಯಿಸುವುದು ಕೇವಲ ನಿಮ್ಮ ಹಕ್ಕು ಮಾತ್ರವಲ್ಲ, ಅದು ದೇಶಕಟ್ಟುವ ಕರ್ತವ್ಯ ಕೂಡ. ಈ ಅಭಿಯಾನದಲ್ಲಿ ಎಲ್ಲ ಅರ್ಹ ಮತದಾರರು ಕೈ ಜೋಡಿಸಿ ಶೇ.100 ರಷ್ಟು ಮತದಾನಕ್ಕೆ ಮುಂದಾಗಬೇಕು ಎಂದರು.
ಮುಧೋಳ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಇದನ್ನು ತಾವೆಲ್ಲರೂ ಗಮನದಲ್ಲಿಟ್ಟುಕೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಸಚಿನ ಶ್ಯಾಮಸುಂದರ ಪ್ರಾಸ್ತಾವಿಕವಾಗಿ ಮಾತನಾಡಿ, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಇದರ ಪ್ರಯೋಜನ ಪ್ರತಿಯೊಬ್ಬರು ಪಡೆಯಬೇಕು ಎಂದು ಮನವಿ ಮಾಡಿದರು.
ನರೇಗಾ ಯೋಜನಾ ಕಾರ್ಮಿಕರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಸ್ಪತ್ರೆಯ ರೋಗಿಗಳು, ಎಸ್.ಆರ್.ಕಂಠಿ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.