ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಅವರು ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಸೋಮವಾರ ನಡೆದ ಬಿಜೆಪಿ ಚಿಕ್ಕೋಡಿ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ ಶಕ್ತಿ ವಂದನ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮೋದಿ ಅವರ ಹಲವಾರು ಯೋಜನೆಗಳು ಸ್ವ-ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಲಿದೆ. ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿ ಮಹಿಳೆಯರಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
ಬಳಿಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ನರೇಂದ್ರ ಮೋದಿಯವರು ಕಳೆದ 9 ವರ್ಷಗಳಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕೆಂದರು.ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ ಹಾಗೂ ನಿಂಗಪ್ಪ ಕೋಕಲೆ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮಂಡಲ ಅಧ್ಯಕ್ಷ ಸಂಜಯ ಪಾಟೀಲ, ಪಕ್ಷದ ಪದಾಧಿಕಾರಿಗಳು ಮಹಿಳೆಯರು ಇದ್ದರು.