‘ಮತಗಳ್ಳತನ’ ವಿರುದ್ಧ ಯುವ ಕಾಂಗ್ರೆಸ್‌ ಅಭಿಯಾನ

KannadaprabhaNewsNetwork |  
Published : Aug 20, 2025, 01:30 AM IST
19ಜಿಯುಡಿ1 | Kannada Prabha

ಸಾರಾಂಶ

ಬಿಜೆಪಿ ಅಭ್ಯರ್ಥಿ ಸೋಲುತ್ತಾರೆಂಬ ಭಯವಿರುವ ಕ್ಷೇತ್ರಗಳಲ್ಲಿ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸಿ ಆ ಮತಗಳ ಮೂಲಕ ಗೆಲುವು ಸಾಧಿಸಿದೆ. ಈ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಮಾಹಿತಿಯನ್ನು ಕಲೆ ಹಾಕಿ ದೇಶಕ್ಕೇ ತಿಳಿಸುವ ಕೆಲಸ ಮಾಡಿದ್ದಾರೆ

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೆಲವೊಂದು ಕ್ಷೇತ್ರಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಕಲಿ ಮತದಾರರನ್ನು ಪಟ್ಟಿಗೆ ಸೇರಿಸಿ ಮೋಸದಿಂದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಗುಡಿಬಂಡೆಯಲ್ಲಿ ಯೂತ್ ಕಾಂಗ್ರೆಸ್ ಮತಗಳ್ಳತನದ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಿತು.

ಈ ವೇಳೆ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಕೆಲವೊಂದು ಕ್ಷೇತ್ರಗಳಲ್ಲಿ ಮೋಸ ಮಾಡಿ ಗೆಲುವು ಸಾಧಿಸಿದೆ ಎಂದು ಆರೋಪಿಸಿದರು.

ಮತಪಟ್ಟಿಯಲ್ಲಿ ನಕಲಿ ಮತದಾರ

ಬಿಜೆಪಿ ಅಭ್ಯರ್ಥಿ ಸೋಲುತ್ತಾರೆಂಬ ಭಯವಿರುವ ಕ್ಷೇತ್ರಗಳಲ್ಲಿ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸಿ ಆ ಮತಗಳ ಮೂಲಕ ಗೆಲುವು ಸಾಧಿಸಿದೆ. ಈ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಮಾಹಿತಿಯನ್ನು ಕಲೆ ಹಾಕಿ ದೇಶಕ್ಕೇ ತಿಳಿಸುವ ಕೆಲಸ ಮಾಡಿದ್ದಾರೆ ಎಂದರು.

ಆದರೆ ಚುನಾವಣಾ ಆಯೋಗ ಈ ಕುರಿತು ತನಿಖೆ ಮಾಡುವುದರ ಬದಲಿಗೆ ರಾಹುಲ್ ಗಾಂಧಿಯವರ ಮೇಲೆ ಕೇಸ್ ಹಾಕುವುದಾಗಿ ಹೇಳುತ್ತಿದೆ. ಈ ನಿಟ್ಟಿನಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮತಗಳ್ಳತನದ ವಿರುದ್ಧ ಪೋಸ್ಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯಾದ್ಯಂತ ಹೋರಾಟ

ಬಳಿಕ ಯುವ ಕಾಂಗ್ರೆಸ್‌ನ ಗುಡಿಬಂಡೆ ತಾಲೂಕು ಅಧ್ಯಕ್ಷ ಅಂಬರೀಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಷ್ಟ್ರ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ರಾಜ್ಯವ್ಯಾಪಿ ಮತಗಳ್ಳತನದ ಕುರಿತು ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿಯವರು ಮತಗಳ್ಳತನ ಕುರಿತು ನಮ್ಮ ರಾಜ್ಯದಿಂದಲೇ ಅಭಿಯಾನ ಆರಂಭಿಸಿದ್ದಾಗಿ ತಿಳಿಸಿದರು.

ಪ್ರಜಾಪ್ರಭುತ್ವ ವಿರೋಧಿ

ಒಬ್ಬ ಮತದಾರ ಒಂದು ಬೂತ್ ನಲ್ಲಿ ಮಾತ್ರ ಮತ ಚಲಾಯಿಸಬೇಕು, ಆದರೆ ಮತಗಳ್ಳತನದ ಮೂಲಕ ಒಬ್ಬ ಮತದಾರ ನಾಲ್ಕೈದು ಬೂತ್ ಗಳಲ್ಲಿ ಮತ ಚಲಾಯಿಸುತ್ತಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಮತಗಳ್ಳತನದ ಮೂಲಕವೇ ಬಿಜೆಪಿ ಪಕ್ಷ ಜಯಗಳಿಸಿದೆ. ಪ್ರಜಾಪ್ರಭುತ್ವ ವಿರೋಧಿಯಾದ ಈ ಮತಗಳ್ಳತನ ನಿಲ್ಲದೇ ಇದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಹಳೇ ಗುಡಿಬಂಡೆ ಲಕ್ಷ್ಮೀನಾರಾಯಣ, ದಲಿತ ಸಂಘಟನೆಯ ಮುಖಂಡ ಜಿ.ವಿ.ಗಂಗಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವಿಕಾಸ್, ಪಿ.ಎಲ್. ಡಿ ಬ್ಯಾಂಕ್ ನಿರ್ದೇಶಕರಾದ ರಾಜರೆಡ್ಡಿ, ಮುಖಂಡರಾದ ದಪ್ಪರ್ತಿ ನಂಜುಂಡ, ಚಾಂದು, ಬಡ್ಡು, ರಮೇಶ್, ಯುವ ಕಾಂಗ್ರೆಸ್ ಮುಖಂಡರಾದ ಕೈಫ್, ಮಧು, ಬಾಲಾಜಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ