ಮೊಬೈಲ್‌ಗಳನ್ನು ಯುವಜನತೆ ಒಳ್ಳೆಯ ಉದ್ದೇಶಕ್ಕಾಗಿ ಬಳಸಿ

KannadaprabhaNewsNetwork |  
Published : Mar 06, 2025, 12:35 AM IST
4ಎಚ್ಎಸ್ಎನ್10 :  | Kannada Prabha

ಸಾರಾಂಶ

ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಎಂದು ಪಿಎಸ್‌ಐ ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಅಂಬೇಡ್ಕರ್ ಭವನದಲ್ಲಿ ಬಿ.ಎಸ್.ಎಸ್. ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾಜಮುಖಿ ಕೆಲಸಗಳಲ್ಲಿ ಒಂದಾದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಪಿಎಸ್ಐ ಆನಂದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸಿದರು.

ನಂತರ ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಎಂದು ಕಿವಿಮಾತು ಹೇಳಿದರು. ಇತ್ತೀಚಿಗೆ ನಡೆಯುತ್ತಿರುವ ಸೈಬರ್‌ ಕ್ರೈಂಗಳ ಬಗ್ಗೆ ಯುವಜನತೆಗೆ ಕಾರ್ಯಕ್ರಮದಲ್ಲ್ಲಿ ತಿಳಿಸಿದರು. ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು, ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಹೇಳಿದರು.

ಮತ್ತೊಬ್ಬ ಅತಿಥಿಗಳಾದ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಒಒ ಎಸ್. ಪಂಚಾಕ್ಷರಿ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರವಾಹ ಪರಿಸ್ಥಿತಿಗಳು, ಬರಗಾಲ ಪರಿಸ್ಥಿತಿಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ ಪೀಠೋಪಕರಣಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ನೀಡಲು ಕಂಪ್ಯೂಟರ್ ಒದಗಿಸುವುದು ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಬಿ.ಎಸ್.ಎಸ್. ಸಂಸ್ಥೆಯು ತನ್ನ ಸಿ.ಎಸ್.ಆರ್‌. ಇನೆಟಿಟಿವ್ ಅಡಿಯಲ್ಲಿ ಆರೋಗ್ಯ ಶಿಕ್ಷಣ, ಹೈನುಗಾರಿಕೆ ಎಂಬ ಮೂರು ಅಂಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಪೋಲೋ ಟೆಲಿ ಮೆಡಿಷನ್ ನೆಟ್ವರ್ಕ್‌ ಪೌಂಡೆಷನ್ ಮುಖಾಂತರ ಬಿಹಾರ ಮಹರಾಷ್ಟ್ರ ಕರ್ನಾಟಕದಲ್ಲಿ ಐದು ಸಂಚಾರಿ ಆರೋಗ್ಯ ಸೇವೆ ಮಾಡುತ್ತಿದೆ. ಸುಮಾರು ವರ್ಷಗಳಿಂದ ಬಿಹಾರ, ಮಹರಾಷ್ಟ್ರ, ತಮಿಳುನಾಡು, ಕರ್ನಾಟಕದಲ್ಲಿ ಈ ರಾಜ್ಯಗಳಲ್ಲಿ ಸರ್ಕಾರಿ ಕಟ್ಟಡ ಅಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳಿಗೆ ಪಿಠೋಪಕರಣಗಳನ್ನು ನೀಡುವುದು ಮತ್ತು ಸರ್ಕಾರಿ ಶಾಲೆಗಳನ್ನು ನವೀಕರಿಸುವುದು, ತಂತ್ರಜ್ಞಾನವನ್ನು ಅಳವಡಿಸುವುದು ಹಾಗೂ ವಿದ್ಯಾರ್ಥಿ ವೇತನ ನೀಡುತ್ತಾ ಬಡ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿದೆ ಎಂದರು.

ಸಮಗ್ರ ಜಾನುವಾರು ಆಭಿವೃದ್ಧಿ ಕೇಂದ್ರಗಳನ್ನು ಕರ್ನಾಟಕದಲ್ಲಿ ಮಂಡ್ಯ, ಗದಗ, ಹಾವೇರಿ ಧಾರವಾಡ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಕಲ್ಪಿಸುತ್ತಿದೆ. ಅದರಂತೆ ಬೇರೆ ರಾಜ್ಯಗಳಲ್ಲಿ ಬಿಹಾರ ಮಹರಾಷ್ಟ್ರ ಮದ್ಯಯ ಪ್ರದೇಶದಲ್ಲಿ ಹೈನುಗಾರಿಕೆಯ ಏಳಿಗೆಗೆ ಶ್ರಮಿಸುತ್ತಿದೆ. ಬಿ.ಎಸ್.ಎಸ್. ಸಂಸ್ಥೆಯು ಇಂತಹ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತದೆ. ಇಂತಹ ಸಮಾಜಮುಖಿ ಕೆಲಸಗಳಲ್ಲಿ ಒಂದಾದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಹಾಸನ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ಅನೇಕ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ತಮ್ಮ ಸಂಸ್ಥೆಯ ಉದ್ದೇಶವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಿಒಒ ಎಸ್. ಪಂಚಾಕ್ಷರಿ, ಸಿ.ಎಸ್.ಆರ್‌. ಚೀಫ್‌ ಮ್ಯಾನೇಜರ್ ಪಂಡಿತ್ ಗಂಗಾಧರ ಪಾಟೀಲ್, ಹೆಡ್ ಎಚ್.ವಿ. ಜಗದೀಶ್, ಡಿಎಂ ಪ್ರಸನ್ನ, ಪ್ರಶಾಂತ್ ಕುಮಾರ್, ರಮೇಶ್ ಕುಮಾರ್, ಇತರರು ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ