ದಿನಕ್ಕೆ 1.20 ಲಕ್ಷ ಲೀಟರ್ ಹಾಲು; ತಿಂಗಳಿಗೆ 13.50 ಕೋಟಿ ಬಟವಾಡೆ

KannadaprabhaNewsNetwork |  
Published : Jun 26, 2026, 02:00 AM IST
23 ಟಿವಿಕೆ 4 – ತುರುವೇಕೆರೆ ಸಮೀಪದ ವಿಶ್ವನಾಥಪುರ ಮಾಳೆಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿಶ್ವನಾಥಪುರ ಮಾಳೆಯಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟನೆ

ಕನ್ನಡಪ್ರಭವಾರ್ತೆ, ತುರುವೇಕೆರೆ

ತಾಲೂಕಿನಲ್ಲಿರುವ ಸುಮಾರು 130 ಹಾಲು ಉತ್ಪಾದಕರ ಸಹಕಾರ ಸಂಘದ ಮೂಲಕ ಜಿಲ್ಲಾ ಹಾಲು ಒಕ್ಕೂಟಕ್ಕೆ ಪ್ರತಿದಿನ ಸರಾಸರಿ 1.20 ಲಕ್ಷ ಲೀಟರ್ ಹಾಲು ಶೇಖರಣೆ ಮಾಡಲಾಗುತ್ತಿದೆ. ಅದರ ಮೊತ್ತ ತಿಂಗಳಿಗೆ ಸುಮಾರು 13.50 ಕೋಟಿ ಆಗಲಿದ್ದು ಅಷ್ಟೂ ಹಣವನ್ನು ಹಾಲು ಉತ್ಪಾದಕರ ಖಾತೆಗೆ ನೇರವಾಗಿ ಹಾಕಲಾಗುತ್ತಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೇಳಿದರು.

ಪಟ್ಟಣಕ್ಕೆ ಹೊಂದಿಕೊಂಡಂತಿರುವ ವಿಶ್ವನಾಥಪುರ ಮಾಳೆಯಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ಹಾಲು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡುವ ರೈತಾಪಿಗಳಿಗೆ ಉತ್ತಮ ಸೇವೆಯೂ ದೊರೆಯಲಿದೆ. ರೈತರಿಗೆ ಅಗತ್ಯವಿರುವ ಪರಿಕರಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು. ಹಾಲು ಉತ್ಪಾದಕರು ಮೃತ ಪಟ್ಟರೆ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುವುದು. ರಾಸುಗಳು ಮೃತಪಟ್ಟರೂ ಸಹ ವಿಮೆ ಸೌಲಭ್ಯ ನೀಡಲಾಗುವುದು. ಉತ್ಪಾದಕರ ಮಕ್ಕಳಿಗೆ ಹೆಚ್ಚಿನ ಶಿಕ್ಷಣಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು. ಉಚಿತ ವಸತಿ ನಿಲಯ ತೆರೆಯಲಾಗಿದೆ ಎಂದು ಸಿ.ವಿ.ಮಹಲಿಂಗಯ್ಯ ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷೆ ವಿನೋಧ ವಹಿಸಿದ್ದರು. ಸದಸ್ಯರಾದ ಹೇಮಾವತಿ, ಚಂದನ, ಭಾಗ್ಯಮ್ಮ, ಸುಮಿತ್ರಮ್ಮ, ಶೋಭಾ, ರೇಣುಕಮ್ಮ, ಶೋಭಾ ಶಿವಕುಮಾರ್, ಮಹಾಲಕ್ಷ್ಮಮ್ಮ, ವೀಣಾ, ರೇಣುಕಮ್ಮ ಮಹೇಶ್, ವಿನೋಧಾ ಮಂಜುನಾಥ್, ವಿಸ್ತರಣಾಧಿಕಾರಿ ಕಿರಣ್ ಕುಮಾರ್ , ಕಾರ್ಯದರ್ಶಿ ಮಮತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಸ್ತೀರಣಾಧಿಕಾರಿ ಕಿರಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಕರ ಪಾವತಿ ಒಟಿಎಸ್‌ಗೆ ಬೆಂಗಳೂರಿಗೆ ನಿಯೋಗ
ಅಂಧ, ಅನಾಥರ ಆಶ್ರಯದಾತ ಕಲ್ಲಯ್ಯಜ್ಜನವರಿಗೇ ಜೀವಬೆದರಿಕೆಗೆ ಭಾರೀ ಆಕ್ರೋಶ