ಹಂಪಿಯ ಪ್ರಮುಖ ಸ್ಮಾರಕಗಳು ಜಲಾವೃತ
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 1,22,000 ಕ್ಯುಸೆಕ್ ನೀರು ನದಿಗೆ ಮಂಗಳವಾರ ಹರಿಸಲಾಗಿದೆ. ಇದರಿಂದ ಹಂಪಿಯ ಪ್ರಮುಖ ಸ್ಮಾರಕಗಳು ಜಲಾವೃತವಾಗಿವೆ. ಒಳಹರಿವು ಭಾರೀ ಏರಿಕೆ ಆಗಿರುವ ಹಿನ್ನೆಲೆ ತುಂಗಭದ್ರಾ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ತುಂಗಭದ್ರಾ ಮಂಡಳಿ ಮತ್ತೊಮ್ಮೆ ಅಲರ್ಟ್ ಸಂದೇಶ ರವಾನಿಸಿದೆ.
ಜಲಾಶಯದ ಮೇಲ್ಭಾಗದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಒಳಹರಿವು 1,30,000 ಕ್ಯುಸೆಕ್ಗೆ ಏರಿಕೆ ಆಗಿದೆ. ಜಲಾಶಯದ 26 ಕ್ರಸ್ಟ್ಗೇಟ್ಗಳಿಂದ 1,22,000 ಕ್ಯುಸೆಕ್ ನೀರು ನದಿಗೆ ಹರಿಸಲಾಗಿದೆ. ಜಲಾಶಯಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಈಗಾಗಲೇ ಸೂಚನೆ ರವಾನಿಸಿದೆ.ಈಗಾಗಲೇ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಆಗುವ ಮಳೆ ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತದೆ.
ಹಂಪಿಯ ಪುರಂದರದಾಸರ ಮಂಟಪ, ಧಾರ್ಮಿಕ ವಿಧಿ ವಿಧಾನ ನೇರವೇರಿಸುವ ಮಂಟಪ, ಕಾಲು ಸೇತುವೆ, ಚಕ್ರತೀರ್ಥ, ಕೋದಂಡರಾಮ ಸ್ವಾಮಿ ದೇವಾಲಯ, ನದಿ ತೀರದ ಸಾಲು ಮಂಟಪಗಳು, ಕೋಟಿಲಿಂಗ, ಕಂಪಭೂಪ ಮಾರ್ಗ ಸೇರಿದಂತೆ ವಿವಿಧ ಸ್ಮಾರಕ ಮತ್ತು ಮಂಟಪಗಳು ಜಲಾವೃತ ಆಗಿವೆ. ಕೋದಂಡರಾಮ ದೇವಾಲಯಕ್ಕೆ ಅಚ್ಯುತದೇವರಾಯ ದೇವಾಲಯದ ಮಾರ್ಗ ಬಳಸಿ ಅರ್ಚಕರು ಆಗಮಿಸಿ ದೇವರ ಪೂಜೆ ನೆರವೇರಿಸುತ್ತಿದ್ದಾರೆ. ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಬಿಡಲಾಗಿರುವ ಹಿನ್ನೆಲೆ ಹಂಪಿಯಲ್ಲಿ ತೆಪ್ಪ ಪ್ರವಾಸೋದ್ಯಮಕ್ಕೂ ಬ್ರೇಕ್ ಬಿದ್ದಿದೆ. ಬುಕ್ಕಸಾಗರ, ಕೋದಂಡ ರಾಮ ದೇವಾಲಯ ಸಮೀಪದಲ್ಲಿ ಹಾಕಲಾಗುತ್ತಿದ್ದ ತೆಪ್ಪವನ್ನು ಹಾಕದಂತೇ ಮೀನುಗಾರರಿಗೆ ಸ್ಥಳೀಯಾಡಳಿತ ಸೂಚನೆ ನೀಡಿದೆ.
ತುಂಗಭದ್ರಾ ಜಲಾಶಯ ರಾಜ್ಯದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ 10 ಲಕ್ಷ ಎಕರೆ ಪ್ರದೇಶಕ್ಕೆ ನೀರು ಒದಗಿಸುತ್ತದೆ. ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ಮಂತ್ರಾಲಯ, ಹಂಪಿ ಸೇರಿದಂತೆ ನದಿ ತೀರದಲ್ಲಿರುವ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಈಗಾಗಲೇ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ಸಂದೇಶ ಕೂಡ ರವಾನಿಸಿವೆ. ತುಂಗಭದ್ರಾ ಮಂಡಳಿ ರಚನೆ ಮಾಡಿರುವ ಕ್ಷಿಪ್ರ ಕಾರ್ಯಪಡೆ ಕೂಡ 24/7 ಕಾರ್ಯಾಚರಿಸುತ್ತಿದೆ. ಜಲಾಶಯಕ್ಕೆ ಒಮ್ಮಲ್ಲೇ ನೀರು ಹರಿದು ಬಂದರೆ 32 ಕ್ರಸ್ಟ್ ಗೇಟ್ಗಳಿಗೂ ಧಕ್ಕೆ ಆಗದಂತೆ ವೈಜ್ಞಾನಿಕ ತಳಹದಿ ಆಧಾರದ ಮೇಲೆ ತಾಂತ್ರಿಕ ಪರಿಣತ ಎಂಜನಿಯರ್ಗಳೊಂದಿಗೆ ಗೇಟ್ಗಳನ್ನೂ ಆಪರೇಟ್ ಮಾಡಲಾಗುತ್ತಿದೆ.ಮಳೆ ಮಾಹಿತಿ ಪಡೆದ ಜಿಲ್ಲಾಧಿಕಾರಿ