ಸಿಇಟಿಗೆ 1.25 ಲಕ್ಷ ಅರ್ಜಿ ಸಲ್ಲಿಕೆ, ತಾಂತ್ರಿಕ ಸಮಸ್ಯೆ ಪರಿಹಾರ: ಕೆಇಎ

KannadaprabhaNewsNetwork |  
Published : Feb 04, 2024, 01:32 AM IST

ಸಾರಾಂಶ

ಮುಂಬರುವ (2024) ಕರ್ನಾಟಕ ಸಾಮಾನ್ಯ ಪರೀಕ್ಷೆ ಬರೆಯಲು ಈವರೆಗೆ 1.25 ಲಕ್ಷ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಂಬರುವ (2024) ಕರ್ನಾಟಕ ಸಾಮಾನ್ಯ ಪರೀಕ್ಷೆ ಬರೆಯಲು ಈವರೆಗೆ 1.25 ಲಕ್ಷ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಕೆಲವು ದಿನಗಳ ಹಿಂದೆ ''''''''ರಾಜ್ಯ ದತ್ತಾಂಶ ಕೇಂದ್ರ''''''''ದಲ್ಲಿ ಒಂದೆರಡು ದಿನ ಸರ್ವರ್ ಡೌನ್ ಸಮಸ್ಯೆ ಇತ್ತು. ಈಗ ಆ ಸಮಸ್ಯೆಯನ್ನು ಪರಿಹರಿಸಲಾಗಿದೆ. ಈ ತಾಂತ್ರಿಕ ಸಮಸ್ಯೆ ನಿರಂತರವಾಗಿ ಇರಲಿಲ್ಲ. 1.25 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 98 ಸಾವಿರ ಅಭ್ಯರ್ಥಿಗಳು ಶುಲ್ಕ ಪಾವತಿಸಿದ್ದಾರೆ, ಪರಿಶೀಲನೆ ಮುಗಿದಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಮೊದಲು ಬಾರಿ ಸಿಇಟಿ, ಅರ್ಜಿಯು ''''''''ಅಪ್ಲಿಕೇಶನ್ ಕಮ್ ವೆರಿಫಿಕೇಶನ್ ಮಾಡೆಲ್'''''''' (ಪರಿಶೀಲನೆ ನಮೂನೆಯೊಂದಿಗೆ) ಹೊಂದಿರುವಂತೆ ಮಾಡಲಾಗಿದೆ. ಅಂದರೆ, ಅರ್ಜಿ ತುಂಬುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳ ‘ಸ್ಯಾಟ್ಸ್’ ನಂಬರ್ ಆಧರಿಸಿ ಅವರಿಗೆ ಸಂಬಂಧಿಸಿದ ಮಾಹಿತಿಗಳನ್ನು ತಂತ್ರಾಂಶವು ಲಭ್ಯವಾಗಿಸಿ ಪರಿಶೀಲಿಸಲು ಅವಕಾಶ ಮಾಡಿಕೊಡುತ್ತದೆ. ಏಕಕಾಲಕ್ಕೆ 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಯಾಟ್ಸ್ ದತ್ತಾಂಶ ಕೋರಿದಾಗ ಉಂಟಾಗಿದ್ದ ಸಮಸ್ಯೆ ಪರಿಹರಿಸಲಾಗಿದೆ.ಅಭ್ಯರ್ಥಿಗಳು ಅರ್ಜಿ ತುಂಬುವಾಗ ಒಟ್ಟೊಟ್ಟಿಗೆ ನಾಲ್ಕೈದು ಸೆಷನ್ ತೆರೆದಿಟ್ಟುಕೊಂಡಿದ್ದರೆ ಆಗ ಒಂದು ಸೆಷನ್‌ಗೆ ತುಂಬುವ ಮಾಹಿತಿ ಮತ್ತೊಂದು ಸೆಷನ್‌ಗೂ ತಾನಾಗಿಯೇ ದಾಖಲಾಗಿ ತಪ್ಪಿಗೆ ಎಡೆಮಾಡಿಕೊಟ್ಟ ಪ್ರಕರಣಗಳು ಬೆಳಕಿಗೆ ಬಂದಿದ್ದವು. ತಂತ್ರಾಂಶದ ಮೂಲಕ ಅದಕ್ಕೂ ಪರಿಹಾರ ಒದಗಿಸಲಾಗಿದೆ. ಆದರೂ, ಅಭ್ಯರ್ಥಿಗಳು ಒಂದು ಸಮಯದಲ್ಲಿ ಒಂದೇ ಸೆಷನ್ ತೆರೆದುಕೊಂಡು ಅರ್ಜಿ ತುಂಬುವುದು ಸೂಕ್ತ ಎಂದು ಅವರು ಸಲಹೆ ನೀಡಿದ್ದಾರೆ.

ಸ್ಯಾಟ್ಸ್ ಮಾಹಿತಿಗೆ ಸಂಬಂಧಿಸಿದಂತೆ ಗೊಂದಲ, ದೋಷಗಳಿದ್ದರೆ ಅಭ್ಯರ್ಥಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿ ಓದಿದ ಶಾಲೆಯ ಹೆಸರು ಹಾಗೂ ಓದಿದ ವರ್ಷ ಸರಿಯಾಗಿದ್ದರೆ ಸ್ಯಾಟ್ಸ್ ಮೂಲಕ ನಿಖರವಾದ ಮಾಹಿತಿ ಲಭ್ಯವಾಗುತ್ತದೆ. ತಪ್ಪುಗಳನ್ನು ಸರಿಪಡಿಸಲು ಫೆ.10ರ ನಂತರವು ಪ್ರಾಧಿಕಾರದ ಪೋರ್ಟಲ್‌ನಲ್ಲಿ ಎಡಿಟಿಂಗ್ ಆಪ್ಷನ್ ಸಕ್ರಿಯಗೊಳಿಸಿ ಅವಕಾಶ ಮಾಡಿಕೊಡಲಾಗುವುದು ಎಂದು ರಮ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ