ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 70 ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಸಮರ್ಪಕವಾಗಿ ಓದಿ ಸದುಪಯೋಗ ಪಡಿಸಿಕೊಳ್ಳುವವರು ನಿಜವಾಗಿಯೂ ಸಾಧಕರು ಎಂದರು.
ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಮಳವಳ್ಳಿಯಲ್ಲಿ ನೂತನ ಗ್ರಂಥಾಲಯ ನಿರ್ಮಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ಗಳಲ್ಲಿ ನೂತನ ಗ್ರಂಥಾಲಯ ಸ್ಥಾಪನೆಗೆ ಅನುಮೋದನೆ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಹಾಗೂ ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಕೃಷ್ಣ ಮೂರ್ತಿ, ಪ್ರಾಧಿಕಾರದ ಸದಸ್ಯರುಗಳಾದ ಚಂದನ್, ತೈಲೂರು ವೆಂಕಟಕೃಷ್ಣ, ಚಂದ್ರು, ಎಸ್.ಎಸ್ ದಯಾನಂದ, ಲಿಂಗರಾಜುಮೂರ್ತಿ.ಎನ್, ಜಿ.ಕೆ ಮಂಜೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಅಕ್ಷರ ಜಾತ್ರೆ ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಡಾ.ರೇವಣ್ಣ (ವಾಲಿಬಾಲ್) ಉದ್ಘಾಟಿಸಲಿದ್ದು, ಖ್ಯಾತ ಕವಿ ಮತ್ತು ವೈದ್ಯ ಡಾ.ಚಂದ್ರಶೇಖರ್ ಪ್ರಧಾನ ಭಾಷಣ ಮಾಡಲಿದ್ದು, ಸಾಹಿತಿ ಡಾ.ಎಚ್.ಎಸ್.ಮುದ್ದೇಗೌಡ ನೇಗಿಲ ಧರ್ಮ ಕೃತಿ ಬಿಡುಗಡೆ ಮಾಡುವರು. ಕವಯತ್ರಿ ಬಿ.ಆರ್.ಉಮಾ ಅಕ್ಷರ ಜಾತ್ರೆ ಸಮ್ಮೇಳನಾಧ್ಯಕ್ಷತೆ ವಹಿಸುವರು ಎಂದು ಹೇಳಿದ್ದಾರೆ.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಡಾ.ರೇವಣ್ಣ (ವಾಲಿಬಾಲ್), ಪ್ರವೀಣ್ ಚಕ್ರವರ್ತಿ, ಬಿ.ರಾಜಣ್ಣ, ಡಾ.ಆರ್.ಮನೋಹರ್, ಶಂಕರ್ ಹೆಮ್ಮಿಗೆ, ಡಾ.ತನ್ಮಯಿ, ಸೋಮಶೇಖರಮೂರ್ತಿ, ಉಮಾ, ಸೌಭಾಗ್ಯ ಸಿದ್ದರಾಜ, ಮುನಿರಾ ಅನ್ವರ್, ಚೈತ್ರಾ , ದೀಪಕ್ಗೌಡ, ಎಂ.ಡಿ.ನಾಗೇಂದ್ರ, ಭಾರ್ಗವಿ ಅವರನ್ನು ಅಭಿನಂದಿಸಲಾಗುವುದು ಎಂದಿದ್ದಾರೆ.