ಪುಟ...3ಕ್ಕೆಲೀಡ್‌ ಬಾಕ್ಸ್‌ ಹಿಪ್ಪರಗಿ ಡ್ಯಾಂನಿಂದ 1.95 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

KannadaprabhaNewsNetwork |  
Published : Jul 27, 2024, 12:54 AM IST
ಹಿಪ್ಪರಗಿ ಜಲಾಶಯ ದಿಂದ 1.95 ಲಕ್ಷ ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು ಕೃಷ್ಣಾನದಿ ತುಂಬಿ ಹರಿಯುತ್ತಿದೆ.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಜಮಖಂಡಿ ಹಿಪ್ಪರಗಿ ಜಲಾಶಯದಿಂದ 1.95 ಲಕ್ಷ ಕ್ಯುಸೆಕ್‌ ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗುತ್ತಿದೆ ಎಂದು ತಹಸೀಲ್ದಾರ್‌ ಸದಾಶಿವ ಮಕ್ಕೊಜಿ ಮಾಹಿತಿ ನೀಡಿದ್ದಾರೆ. ಜಲಾಶಯದ ನೀರಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಜರುಗಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಒಳ ಹರಿವಿನ ಪ್ರಮಾಣದಷ್ಟು ನೀರನ್ನು ನದಿಪಾತ್ರಕ್ಕೆ ಬಿಡಲಾಗಿದೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ಹಿಪ್ಪರಗಿ ಜಲಾಶಯದಿಂದ 1.95 ಲಕ್ಷ ಕ್ಯುಸೆಕ್‌ ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗುತ್ತಿದೆ ಎಂದು ತಹಸೀಲ್ದಾರ್‌ ಸದಾಶಿವ ಮಕ್ಕೊಜಿ ಮಾಹಿತಿ ನೀಡಿದ್ದಾರೆ. ಜಲಾಶಯದ ನೀರಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಜರುಗಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಒಳ ಹರಿವಿನ ಪ್ರಮಾಣದಷ್ಟು ನೀರನ್ನು ನದಿಪಾತ್ರಕ್ಕೆ ಬಿಡಲಾಗಿದೆ ಎಂದರು.ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಜಲಾಶಯದಿಂದ 3 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಗುರುವಾರ ಜಿಲ್ಲಾಧಿಕಾರಿಗಳ ಸಭೆ ನಡೆಸಿದ್ದರ ಪರಿಣಾಮ ನೀರಿನ ಹೊರ ಹರಿವು ಹೆಚ್ಚಿಸಲಾಗಿದೆ ಎಂದರು.

ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ನದಿ ಪಾತ್ರದ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರವಾಗಲು ಸೂಚನೆ ನೀಡಲಾಗಿದೆ. ಮುತ್ತೂರು, ತುಬಚಿ, ಕಂಕಣವಾಡಿ ಗ್ರಾಮಗಳಲ್ಲಿಯ ನಾವಿಕರಿಗೆ ತಾಲೂಕು ಆಡಳಿತದಿಂದ ಇಂಧನ ಪೂರೈಸಲಾಗಿದ್ದು, ನದಿ ತೀರದ ಮನೆಗಳ ಸ್ಥಳಾಂತರಕ್ಕೆ ಸಹಕರಿಸಲು ಸೂಚಿಸಲಾಗಿದೆ. ನೋಡಲ್‌ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗ್ರಾಮಗಳಲ್ಲಿ ಮುಕ್ಕಾಂ ಹೂಡಿದ್ದು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ 3.5 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಬಿಡಿಸಲು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ತಾಲೂಕು ಆಡಳಿತ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನದಿಪಾತ್ರದ ಜನರು ಸಹಕರಿಸಬೇಕು. ಕಾಳಜಿ ಕೆಂದ್ರಗಳನ್ನು ಸ್ಥಾಪಿಸಲಾಗಿದೆ ಅಗತ್ಯ ಬಿದ್ದರೆ ಜನರನ್ನು ಕೇಂದ್ರಗಳಿಗೆ ಸ್ಥಳಾಂತರಿಸಲಾಗುದು ಎಂದು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!