ಅನಿಲ್ ಬಿರಾದರ್
ಸಮೀಪದ ಬಸವಸಾಗರ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ಪ್ರತಿನಿತ್ಯ ಒಳಹರಿವು ಬರುತ್ತಿರುವುದರಿಂದ ಬುಧವಾರದಿಂದಲೇ ಜಲಾಶಯದಿಂದ ನದಿಗೆ ನೀರು ಹರಿಬಿಡುತ್ತಿದ್ದು, ಶನಿವಾರ ಸಂಜೆಯ ಹೊತ್ತಿಗೆ 1 ಲಕ್ಷ ಕ್ಯುಸೆಕ್ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
ಆಲಮಟ್ಟಿ ಹಾಗೂ ಬಸವಸಾಗರ ಉಭಯ ಜಲಾಶಯಗಳು ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವುದು ಹಾಗೂ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಸಹ ಅಧಿಕವಾಗಿರುವುದರಿಂದ ಮುಂಬರುವ ದಿನಗಳಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಜಾಸ್ತಿಯಾದಲ್ಲಿ ನದಿಗೂ ಸಹ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆಗಳಿದ್ದು ನದಿ ತೀರದ ಜನತೆ ಜಾಗೃತದಿಂದರಬೇಕು ಎಂದು ನಾರಾಯಣಪುರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವಿಜಯಕುಮಾರ ಅರಳಿ ತಿಳಿಸಿದ್ದಾರೆ.ನಿಗಮ ಅಧಕಾರಿಗಳಿಂದ ಸದ್ಯ ಸುತ್ತೋಲೆ ಹೋರಡಿಸಿದ್ದು, ಈ ಕೆಳಕಂಡಂತೆ ಬಸವಸಾಗರ ಜಲಾಶಯದಿಂದ ಬಿಡುವ ನೀರಿನ ಪ್ರಮಾಣದಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದೆ.
ಪ್ರವಾಹ ಮುನ್ನೆಚ್ಚರಿಕೆ : ಎಲ್ಲೆಲ್ಲಿ ಏನೇನು ?
1.50 ಲಕ್ಷ ಕ್ಯುಸೆಕ್ ವರೆಗೆ ನೀರು ಹರಿಸಿದರೆ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮ ನಡುಗಡ್ಡೆಯಾಗಬಹುದು.
3 ಲಕ್ಷ ಕ್ಯುಸೆಕ್ವರೆಗೆ ನೀರು ಬಿಟ್ಟರೆ ಕೃಷ್ಣಾ ನದಿ ಇಕ್ಕೆಲಗಳಲ್ಲಿ ಪ್ರವಾಹ ಉಕ್ಕಿ ಹರಿಯುವದರಿಂದ, ನದಿ ಮೇಲ್ಪಟ್ಟ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದಿಂದ ಸುರಕ್ಷಿತರಾಗಿರಬೇಕು.
5.40 ಲಕ್ಷ ಕ್ಯಸೆಕ್ ನೀರು ಹರಿಸಿದರೆ ಯರಗೋಡಿ ಸೇತುವೆ ಮತ್ತು ಗೂಗಲ್ ಗ್ರಾಮದ ಹತ್ತಿರ ಗೂಗಲ್ ಬ್ಯಾರೇಜ್ ಮುಳುಗಡೆಯಾಗಬಹುದು.