ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಹೊನ್ನಾವರ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಮಳೆಯಾಶ್ರಿತ ಪ್ರದೇಶಾಭಿವೃದ್ಧಿ ಯೋಜನೆಯಡಿ 50 ಕ್ಕೂ ಅರ್ಹ ಫಲಾನುಭವಿ ರೈತರಿಗೆ ಚಾಪ್ ಕಟರ್ ಯಂತ್ರಗಳನ್ನು ವಿತರಿಸಿ ಮಾತನಾಡಿದರು.
ರಾಜ್ಯಾದಂತ ಈ ಬಾರಿ 82ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ವಿವಿಧ ಬಗೆಯ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ 40 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಕಟಾವು ಆಗಿದೆ. ಇನ್ನುಳಿದ 40 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಬೆಳೆ ಬೆಳೆದು ನಿಂತಿದೆ. ಒಂದು ಲಕ್ಷ ಹೆಕ್ಟೇರ್ನಲ್ಲಿ ಪ್ರಕೃತಿ ವಿಕೋಪಕ್ಕೆ ಬೆಳೆ ನಷ್ಟವಾಗಿದೆ. ನಷ್ಟ ಹೊಂದಿರುವ ಎಲ್ಲ ರೈತರಿಗೂ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದರು.ಕೃಷಿ ಪದ್ಧತಿಯಲ್ಲಿ ಹಲವು ಬದಲಾವಣೆಯಾಗಿದ್ದು, ಹವಾಮಾನಕ್ಕೆ ತಕ್ಕಂತೆ ಕೃಷಿಯನ್ನು ಬೆಳೆಯಬೇಕು. ರೈತರ ಜಮೀನುಗಳಲ್ಲಿ ಕೃಷಿ ಕೆಲಸ ಮಾಡುವ ಕಾರ್ಮಿಕರು ಸಿಗುತ್ತಿಲ್ಲ. ಕಾರ್ಮಿಕರ ಕೊರತೆ ನೀಗಿಸಲು ಹಲವು ಯೋಜನೆಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದರು.
ಕಳೆದ ಐದು ವರ್ಷ ಅಧಿಕಾರ ನಡೆಸಿದ ಜೆಡಿಎಸ್ ಬಿಜೆಪಿ ಸರ್ಕಾರದ ಸಾಧನೆ ಏನು? ರೈತರಿಗೆ ಅನುಕೂಲವಾಗುವ ಯಾವುದಾದರೂ ಒಂದು ಯೋಜನೆ ಜಾರಿ ಮಾಡಲಿಲ್ಲ. ಕೇವಲ ಅಧಿಕಾರ ನಡೆಸಿ ಮಜಾ ಮಾಡಿಕೊಂಡು ಹೋದರು ಎಂದು ದೂರಿದರು.
ಮಂಡ್ಯದ ರೈತರೊಬ್ಬರಿಗೆ ಒಂದು ಕೋಟಿ ಬೆಲೆ ಬಾಳುವ ಯಂತ್ರಕ್ಕೆ 40 ಲಕ್ಷ ರಿಯಾಯಿತಿ ನೀಡಲಾಗಿದೆ. ಕೃಷಿಯಲ್ಲಿ ಸಮಗ್ರ ಬದಲಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಬಾರಿ ಮೂರು ಸಾವಿರ ಕೋಟಿಯಷ್ಟು ವಿಮೆ ಹಣವನ್ನು ವಿವಿಧ ಯೋಜನೆಯಡಿ ರೈತರಿಗೆ ಪಾವತಿ ಮಾಡಿದ್ದೇವೆ. ಇದು ರಾಜ್ಯದ ಇತಿಹಾಸದಲ್ಲೇ ದೊಡ್ಡ ಮೊತ್ತ ಎಂದು ಹೇಳಿದರು.
ಈ ವೇಳೆ ಮಾಜಿ ಎಂಎಲ್ಸಿ ಎನ್.ಅಪ್ಪಾಜಿಗೌಡ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿದೇಶಕ ಡಾ.ಭಾನುಪ್ರಕಾಶ್, ಮುನ್ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣ, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಹೊನ್ನಾವರ ಗ್ರಾಪಂ ಅಧ್ಯಕ್ಷ ಹರೀಶ್, ಮುಖಂಡರಾದ ಬೋರೇಗೌಡ, ತಾ.ಪಂ. ಮಾಜಿ ಅಧ್ಯಕ್ಷ ಆರ್.ಕೃಷ್ಣೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಸೇರಿದಂತೆ ಹಲವರು ಇದ್ದರು.