ಕನ್ನಡಪ್ರಭ ವಾರ್ತೆ ಮಂಡ್ಯ
ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅವರು, ಈ ಹಿಂದೆ ಕಾರು ಬಿದ್ದು ಸಾವು ಸಂಭವಿಸಿದಾಗ ಕೂಡ ಬ್ಲಾಕ್ ಸ್ಪಾಟ್ ಎಂದು ಸ್ಥಳವನ್ನು ಗುರುತಿಸಲಾಗಿತ್ತು. ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿ.ಸಿ.ನಾಲೆಗಳ ರಸ್ತೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಡೆಗೋಡೆ ನಿರ್ಮಾಣ ಸೂಚನಾ ಫಲಕ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಜಿಲ್ಲಾ ಆಡಳಿತದ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಮಾ.೫ರಂದು ರಾಜ್ಯ ಮಟ್ಟದ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ
ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ನಿಂದ ಆರೋಗ್ಯಕರ ಜೀವನಕ್ಕೆ ರಾಗಿಯ ಮಹತ್ವ ಕುರಿತು ಉಪನ್ಯಾಸ ಮತ್ತು ರಾಜ್ಯ ಮಟ್ಟದ ರಾಗಿಮುದ್ದೆ ಉಣ್ಣುವ ಸ್ಪರ್ಧೆಯನ್ನು ಬೆಂಗಳೂರಿನ ಸುಂದರ್ರಾಮ್ ಶೆಟ್ಟಿ ಮೆಮೋರಿಯಲ್ ಹಾಲ್ನಲ್ಲಿ ಮಾ. ೫ರಂದು ಬೆಳಗ್ಗೆ ೧೦.೩೦ಕ್ಕೆ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಚ್.ಕೆ.ಬೊಮ್ಮೇಗೌಡ ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿ ಆರೋಗ್ಯದಲ್ಲಿ ವ್ಯತ್ಯಾಸವಾದರೆ ಟ್ರಸ್ಟ್ ಯಾವುದೇ ರೀತಿಯಲ್ಲೂ ಜವಾಬ್ದಾರರಲ್ಲ. ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಣಿಗೆ ಮಾ.೧ ಕೊನೇ ದಿನಾಂಕವಾಗಿದೆ. ಆಸಕ್ತರು ಆರ್.ಅಶ್ವತ್ಥನಾರಾಯಣಗೌಡ- ೯೦೬೦೬೨೨೨೮೬ ಸಂಪರ್ಕಿಸಬಹುದು. ಸ್ಪರ್ಧೆಯ ಪ್ರವೇಶ ಶುಲ್ಕ ೧೦೦೦ ರು. ಆಗಿದೆ. ವಿಜೇತರಿಗೆ ಪ್ರಥಮ ಬಹುಮಾನ ೨೫ ಸಾವಿರ ರು., ದ್ವಿತೀಯ-೧೫ ಸಾವಿರ ರು., ತೃತೀಯ-೭೫೦೦ ರು.ಗಳನ್ನು ನಿಗದಿಪಡಿಸಲಾಗಿದೆ ಎಂದರು.