ಶೇ.95ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ನಗದು ಬಹುಮಾನ: ವಿ.ಎಸ್.ಉಮೇಶ್

KannadaprabhaNewsNetwork |  
Published : Jun 21, 2026, 01:30 AM IST
20ಕೆಎಂಎನ್ ಡಿ17 | Kannada Prabha

ಸಾರಾಂಶ

ನಾವು ವ್ಯಾಸಂಗ ಮಾಡಿದ ಶಾಲೆಯನ್ನು ಮರೆಯಬಾರದು ಎಂಬ ದೃಷ್ಟಿಯಿಂದ ಇಂದು ನಿಮ್ಮಗಳ ಮುಂದೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನೀವು ಉನ್ನತ ವ್ಯಾಸಂಗ ಪಡೆದು ಶಾಲೆಗೆ ಕೀರ್ತಿ ತರಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ಹಲಗೂರು ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದಿನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.95 ಅಂಕ ಪಡೆದರೆ ಆ ವಿದ್ಯಾರ್ಥಿಗಳಿಗೆ ನಾನು 10,000 ರು. ಬಹುಮಾನ ನೀಡುವುದಾಗಿ ಹಲಗೂರು ಲಯನ್ಸ್ ಕ್ಲಬ್ ಸದಸ್ಯ ಹಾಗೂ ವಿದ್ಯಾಸಂಸ್ಥೆ ನಿರ್ದೇಶಕ ವಿ.ಎಸ್.ಉಮೇಶ್ ತಿಳಿಸಿದರು.

ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಾಲಾ ಆವರಣದಲ್ಲಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿ, ನಾನು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿ ಈಗ ಉನ್ನತ ಉದ್ಯಮಿಯಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದರು.

ನಾವು ವ್ಯಾಸಂಗ ಮಾಡಿದ ಶಾಲೆಯನ್ನು ಮರೆಯಬಾರದು ಎಂಬ ದೃಷ್ಟಿಯಿಂದ ಇಂದು ನಿಮ್ಮಗಳ ಮುಂದೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನೀವು ಉನ್ನತ ವ್ಯಾಸಂಗ ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಸಂಸ್ಥೆ ಅಧ್ಯಕ್ಷ ಎಚ್.ಎಂ.ಆನಂದ್ ಕುಮಾರ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ವಾಹನ ವ್ಯವಸ್ಥೆ, ನೋಟ್ ಪುಸ್ತಕಗಳು, ಸಮವಸ್ತ್ರಗಳನ್ನು ನೀಡುತ್ತಿದ್ದೇವೆ. ಇದನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವ್ಯಾಸಂಗ ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಲ್ಲಿಕಾರ್ಜುನ ಸ್ವಾಮಿ, (ಅಯ್ಯಣ್ಣ), ಗುರುಸ್ವಾಮಿ, ಎ.ಟಿ.ಶ್ರೀನಿವಾಸ್ ಹಲಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ, ಸಿ.ಪ್ರವೀಣ, ಉಮೇಶ, ಗುಣೇಶ, ಸುಂದರರಾಜ್, ಬಾಬು, ಮುಖ್ಯ ಶಿಕ್ಷಕ ಎಚ್.ಶಿವರಾಮ್, ಸಹಶಿಕ್ಷಕರಾದ ಸವಿತಾ, ಕೃಷ್ಣ, ಸೇರಿದಂತೆ ಇತರರು ಇದ್ದರು.

ಜೂ.23 ಮತ್ತು 24 ರಂದು ವಿದ್ಯುತ್ ನಿಲುಗಡೆಶ್ರೀರಂಗಪಟ್ಟಣ: ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ವಿದ್ಯುತ್ ಕಂಬ ಬದಲಿಸುವ ಉದ್ದೇಶದಿಂದ ಜೂ.23 ಮತ್ತು ಜೂ.24 ರಂದು ವಿದ್ಯುತ್ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶ್ರೀರಂಗಪಟ್ಟಣ ಉಪ ವಿಭಾಗ ವ್ಯಾಪ್ತಿಯ ದರಸಗುಪ್ಪೆ ಶಾಖಾ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಬಲ್ಲೇನಹಳ್ಳಿ, ದರಸಗುಪ್ಪೆ ಹಾಗೂ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಗಳು ಸೇರಿದಂತೆ ಪಾಂಡವಪುರ ವಾಟರ್ ಸಪ್ಪೆ ಸ್ಥಾವರಕ್ಕೆ ಅಂದು ಬೆಳಗ್ಗೆ 9 ರಿಂದ ಸಂಜೆ 5.30ರವರಗೆ ವಿದ್ಯುತ್ ಅಡಚಣೆ ಆಗಲಿದೆ. ಹಾಗಾಗಿ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಅವರು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಲೆ ಮಂಟಪ ಧ್ವಂಸ: ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರ ವಿರುದ್ಧ ಆಕ್ರೋಶ
ಮದ್ದೂರು ತಾಲೂಕಿಗೆ ಹೊಸದಾಗಿ 5 ಪಬ್ಲಿಕ್ ಶಾಲೆಗಳು ಮಂಜೂರು: ಕೆ.ಎಂ.ಉದಯ್