₹75.31 ಕೋಟಿಯ 10.8 ಎಕರೆ ಸರ್ಕಾರಿ ಭೂ ಒತ್ತುವರಿ ತೆರವು

KannadaprabhaNewsNetwork |  
Published : Dec 21, 2025, 03:00 AM ISTUpdated : Dec 21, 2025, 10:09 AM IST
GBA

ಸಾರಾಂಶ

ಬೆಂಗಳೂರು ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 75.31 ಕೋಟಿ ರು. ಮೌಲ್ಯದ 10.08 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.ಗೋಮಾಳ, ರಾಜಕಾಲುವೆ, ಸರ್ಕಾರಿ ಕುಂಟೆ, ಸರ್ಕಾರಿ ಖರಾಬು, ಸರ್ಕಾರಿ ಸ್ಮಶಾನ, ಕೆರೆ, ಮುತ್ತುರಾಯ ದೇವರ ಇನಾಂ, ಖರಾಬು ತೋಪು ಜಾಗಗಳ ಒತ್ತುವರಿ 

 ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 75.31 ಕೋಟಿ ರು. ಮೌಲ್ಯದ 10.08 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.ಗೋಮಾಳ, ರಾಜಕಾಲುವೆ, ಸರ್ಕಾರಿ ಕುಂಟೆ, ಸರ್ಕಾರಿ ಖರಾಬು, ಸರ್ಕಾರಿ ಸ್ಮಶಾನ, ಕೆರೆ, ಮುತ್ತುರಾಯ ದೇವರ ಇನಾಂ, ಖರಾಬು ತೋಪು ಜಾಗಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.

ಯಲಹಂಕ ತಾಲೂಕಿನಲ್ಲಿ ತೆರವು

ಯಲಹಂಕ ತಾಲೂಕಿನ ಚಿಕ್ಕಬೆಟ್ಟದಹಳ್ಳಿ ಗ್ರಾಮದಲ್ಲಿ 59.24 ಕೋಟಿ ರು. ಮೌಲ್ಯದ 1.28 ಎಕರೆ ಸರ್ಕಾರಿ ಗೋಮಾಳ, ಕಡತನಮಲೆ ಗ್ರಾಮದಲ್ಲಿ 2 ಕೋಟಿ ರು. ಮೌಲ್ಯದ 1.10 ಎಕರೆ ಸರ್ಕಾರಿ ತೋಪು ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯ ಫಲಕ ನೆಡಲಾಯಿತು.

ಬೆಂಗಳೂರು ಪೂರ್ವ ತಾಲೂಕಿನ ಹಗದೂರಿನಲ್ಲಿ 3 ಕೋಟಿ ರು. ಮೌಲ್ಯದ 8 ಗುಂಟೆ ಗೋಮಾಳ, ದೊಡ್ಡಗುಬ್ಬಿಯಲ್ಲಿ 1.5 ಕೋಟಿ ರು. ಮೌಲ್ಯದ 5 ಗುಂಟೆ ರಾಜಕಾಲುವೆ,

ದಕ್ಷಿಣ ತಾಲೂಕಿನ ಮೈಲಸಂದ್ರದಲ್ಲಿ ತೆರವು

ದಕ್ಷಿಣ ತಾಲೂಕಿನ ಮೈಲಸಂದ್ರದಲ್ಲಿ 1 ಕೋಟಿ ರು. ಮೌಲ್ಯದ 20 ಗುಂಟೆ ಜಮೀನು, ತರಳು ಗ್ರಾಮದಲ್ಲಿ 2.50 ಕೋಟಿ ರು. ಮೌಲ್ಯದ 2 ಎಕರೆ ಕೆರೆ, ತಗಚಗುಪ್ಪೆ ಗ್ರಾಮದಲ್ಲಿ 4 ಕೋಟಿ ರು. ಮೌಲ್ಯದ 20 ಗುಂಟೆ ಸರ್ಕಾರಿ ಖರಾಬು ಜಮೀನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌
ಕರ್ಕಶ ಸೌಂಡ್‌ ಸಿಸ್ಟಮ್‌ಗಳ ಮೇಲೆ ಖಾಕಿ ಕಣ್ಣು