ಧಾರವಾಡ:
ಹೌದು. ಹುಬ್ಬಳ್ಳಿಯ ಕೆಎಂಸಿಐಆರ್ (ಧಾರವಾಡ ಜಿಲ್ಲೆ ಮಾತ್ರ), ಧಾರವಾಡ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಈ ಹಲವು ಕಾರಣಗಳಿಂದಾಗಿ ಇಷ್ಟು ಸಂಖ್ಯೆಯಲ್ಲಿ ಬಾಣಂತಿಯರು ಹಾಗೂ ಮಕ್ಕಳು ಮೃತಪಟ್ಟಿರುವುದು ಜಿಲ್ಲಾ ಆರೋಗ್ಯ ಇಲಾಖೆ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.
ಹೊರ ಜಿಲ್ಲೆ ಸೇರಿ:ಹುಬ್ಬಳ್ಳಿಯ ಕೆಎಂಸಿಐಆರ್ ಆಸ್ಪತ್ರೆಯ ಪಕ್ಕದ ಹಾವೇರಿ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಿಂದಲೂ ಹೆರಿಗೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗುತ್ತಾರೆ. ಈ ಪೈಕಿ ಧಾರವಾಡ ಜಿಲ್ಲೆಯ ಹತ್ತು ಬಾಣಂತಿಯರು ಸೇರಿದಂತೆ ಎಂಟು ತಿಂಗಳಲ್ಲಿ ಒಟ್ಟು 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣ ಎನ್ನಲಾದ ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣದಿಂದ ಒಂದೇ ಒಂದು ಬಾಣಂತಿಯರ ಸಾವು ಜಿಲ್ಲೆಯಲ್ಲಿ ಆಗಿಲ್ಲ ಎನ್ನುವುದು ಸಮಾಧಾನದ ಸಂಗತಿ. ಧಾರವಾಡ ಜಿಲ್ಲೆಗೆ ಪಶ್ಚಿಮ ಬಂಗಾಲದ ಫಾರ್ಮಾಸೆಟಿಕಲ್ ಕಂಪನಿಯೊಂದರಿಂದ ಸರಬರಾಜು ಆದ ರಿಂಗರ್ ಲ್ಯಾಕ್ಟೇಟ್ ದ್ರಾವಣದಿಂದ ಯಾವುದೇ ಬಾಣಂತಿ ಸಾವನ್ನಪ್ಪಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಮಾಹಿತಿ ನೀಡಿದರು. ಜತೆಗೆ ಈ ದ್ರಾವಣದ ಗುಣಮಟ್ಟದ ಪರಿಶೀಲನೆಗೆ ಜಿಲ್ಲಾ ಔಷಧ ನಿಯಂತ್ರಣ ಘಟಕದಿಂದ ದ್ರಾವಣದ ಮಾದರಿ ಸಂಗ್ರಹಿಸಿ ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಸಂಪೂರ್ಣ ವರದಿಗಾಗಿ ಕಾಯಲಾಗುತ್ತಿದೆ.
ಒಟ್ಟಾರೆ ಬಾಣಂತಿಯರ ಹಾಗೂ ಶಿಶು ಮರಣದಲ್ಲಿ ಖಾಸಗಿ ಆಸ್ಪತ್ರೆಗಿಂತ ಹೆಚ್ಚು ಸರ್ಕಾರಿ ಆಸ್ಪತ್ರೆ ಎನ್ನುವುದು ಮಾತ್ರ ಸತ್ಯ.