ಸೇತುವೆಗೆ ₹೧೦ ಕೋಟಿ: ಸಿದ್ದು ಕೊಣ್ಣೂರಗೆ ಸನ್ಮಾನ

KannadaprabhaNewsNetwork |  
Published : Feb 18, 2026, 03:00 AM IST
ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿಗೆ ರು.೧೦ ಕೋಟಿ ಮಂಜೂರು! | Kannada Prabha

ಸಾರಾಂಶ

೩ ವರ್ಷಗಳಿಂದ ಸ್ಥಗಿತಗೊಂಡಿದ್ದ ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿಗೆ ಸರಕಾರದಿಂದ ₹10 ಕೋಟಿ ಅನುದಾನ ಮಂಜೂರಾಗಿದ್ದು, ಹಣ ಬಿಡುಗಡೆಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಅವರನ್ನು ರಬಕವಿಯಲ್ಲಿ ಪಕ್ಷಭೇದ ಮರೆತು ಎಲ್ಲರೂ ಸೇರಿ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

೩ ವರ್ಷಗಳಿಂದ ಸ್ಥಗಿತಗೊಂಡಿದ್ದ ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿಗೆ ಸರಕಾರದಿಂದ ₹10 ಕೋಟಿ ಅನುದಾನ ಮಂಜೂರಾಗಿದ್ದು, ಹಣ ಬಿಡುಗಡೆಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರರನ್ನು ರಬಕವಿಯಲ್ಲಿ ಪಕ್ಷಭೇದ ಮರೆತು ಎಲ್ಲರೂ ಸೇರಿ ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಕೊಣ್ಣೂರ, ಬರುವ ವರ್ಷದೊಳದಾಗಿ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದ್ದು, ಗುತ್ತಿಗೆದಾರರಿಗೆ ಸಮರ್ಪಕವಾಗಿ ವೇತನ ದೊರಕದಿರುವುದು ಗಮನಕ್ಕೆ ಬಂದಿದೆ. ಎಲ್ಲ ತೊಂದರೆ ನಿವಾರಿಸಿ ಸುಗಮವಾಗಿ ಸೇತುವೆ ಕಾಮಗಾರಿ ಮುಕ್ತಾಯವಾಗುವವರೆಗೂ ನಿಮ್ಮೊಂದಿಗಿರುವುದಾಗಿ ಭರವಸೆ ನೀಡಿದರು.

ಈ ವೇಳೆ ಮಹಾದೇವ ದೂಪದಾಳ, ಸಂಜಯ ಜೋತಾವರ, ಬಸವರಾಜ ತೆಗ್ಗಿ, ನೀಲಕಂಠ ಮುತ್ತೂರ, ಚಂದ್ರು ಬಕನೆತ್ತಿ, ಸದಾಶಿವ ಖವಾಸಿ, ಶಿವಾನಂದ ಕಡಕೋಳ, ಮೊಹ್ಮದ್ ಝಾರೆ, ಆನಂದ ಜುಗಳಿ, ರವಿ ಗಡಾದ, ಇಂದ್ರಜೀತ ಲಾಳಕೆ, ಸಂಜಯ ತೇಲಿ, ಆನಂದ ಜುಗಳಿ ಸೇರಿದಂತೆ ಅನೇಕರಿದ್ದರು. ಈ ಕಾರ್ಯಕ್ರಮದಲ್ಲಿ ಕೆಲವು ಬಿಜೆಪಿಯ ಕೆಲ ಮುಖಂಡರು, ನಗರ ಸೇವಕರಿರುವುದು ಅಚ್ಚರಿಗೆ ಕಾರಣವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ವರ್ಷವೇ ರಾಜ್ಯದಲ್ಲಿ ವಿದ್ಯಾರ್ಥಿ ಚುನಾವಣೆ
ಗ್ರಾಮೀಣ ಕ್ರೀಡಾಪಟುಗಳಲ್ಲಿ ಅಪ್ರತಿಮ ಪ್ರತಿಭೆ